ಕಾಪುವಿನಲ್ಲಿ ಹತ್ತು ಕೋಟಿ ವೆಚ್ಚದಲ್ಲಿ ಮಿನಿ ವಿಧಾನಸೌದ : ಶಾಸಕ ಲಾಲಾಜಿ ಆರ್ ಮೆಂಡನ್. ಕಾಪುವಿನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹೇಳಿಕೆ

Featured, ಉಡುಪಿ

ಕಾಪುವಿನಲ್ಲಿ ಹತ್ತು ಕೋಟಿ ವೆಚ್ಚದಲ್ಲಿ ಮಿನಿ ವಿಧಾನಸೌದ : ಶಾಸಕ ಲಾಲಾಜಿ ಆರ್ ಮೆಂಡನ್.

ಕಾಪು: ಕಾಪು ತಾಲ್ಲೂಕು ಮಟ್ಟದ ರಾಷ್ಟ್ರೀಯ ನಾಡಹಬ್ಬ ಆಚರಣಾ ಸಮಿತಿ ಹಾಗೂ ತಹಶಿಲ್ದಾರ್ ಕಾಪು ತಾಲೂಕು ವತಿಯಿಂದ 71 ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಬಂಗ್ಲೆ ಮೈದಾನದಲ್ಲಿ ನಡೆಯಿತು.

ಧ್ವಜಾರೋಹಣಗೈದು ಕಾಪು ತಾಲೂಕು ತಹಶಿಲ್ದಾರ್ ಮಹಮ್ಮದ್ ಇಸಾಕ್ ಮಾತಾಡಿ ” ಜಾತ್ಯತೀತ, ಸಾಮರಸ್ಯ ದ ಶಿಕ್ಷಣದ ಅಗತ್ಯ ಪ್ರಸ್ತುತ ಕಾಲಘಟ್ಟದಲ್ಲಿ ಅಗತ್ಯವಿದೆ,ಪ್ರತಿಯೊಬ್ಬ ಕೂಡ ಒಬ್ಬರನ್ನೊಬ್ಬರು ಅರಿತುಕೊಂಡು ಸಾಗುವ ನಾಗರಿಕತೆ ಮಾಡಬೇಕಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಪುವಿನ ಶಾಸಕರು ಲಾಲಾಜಿ ಆರ್ ಮೆಂಡನ್ ಮಾತಾಡಿ ” ದೇಶದಲ್ಲಿ ಮತ್ತು ರಾಜ್ಯದಲ್ಲಿ ಸಂವಿಧಾನ ಬದ್ದ ಆಡಳಿತ ಇದೆ ಮತ್ತು ಪೌರತ್ವ ಕಾಯ್ದೆಯ ಬಗ್ಗೆ ಯಾವುದೇ ಗೊಂದಲ ಅಗತ್ಯ ಇಲ್ಲ ಮೂಲ ಭಾರತೀಯರಿಗೆ ಯಾವುದೇ ರೀತಿಯ ಸಮಸ್ಯೆ ಈ ಕಾಯ್ದೆಯಿಂದ ಇಲ್ಲ ಎಂದರು.

ಮುಂದಿನ ಕೆಲವೇ ತಿಂಗಳುಗಳಲ್ಲಿ ಕಾಪುವಿಗೆ ಸುಮಾರು ಹತ್ತು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುವ ಮಿನಿ ವಿಧಾನಸೌದ ಕ್ಕೆ ಶೀಘ್ರ ಮೂಹುರ್ತಕ್ಕೆ ಪ್ರಮಾಣಿಕ ಪ್ರಯತ್ನ ಮಾಡಲಾಗುವುದೆಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಜ್ಯ, ಜಿಲ್ಲೆಯನ್ನು ಪ್ರತಿನಿಧಿಸಿದ ಕ್ರೀಡಾ ಮತ್ತು ಸಾಂಸ್ಕೃತಿಕ ವಿಭಾಗದಲ್ಲಿ ಪ್ರತಿನಿಧಿಸಿ ಬಹುಮಾನ ಪಡೆದ ವಿಧ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

ಹಾಗೂ ಮುಖ್ಯಮಂತ್ರಿ ವೈದ್ಯಕೀಯ ಪರಿಹಾರ ನಿಧಿಯ ಚೆಕ್ಕನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು.

ಸಭಾ ಕಾರ್ಯಕ್ರಮದ ನಂತರ ಶಾಲಾ ಕಾಲೇಜು ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ವೇದಿಕೆಯಲ್ಲಿ ಕಾಪು ಪುರಸಭಾ ಸದಸ್ಯರು, ಕಾಪು ತಾಲೂಕು ಪಂಚಾಯತ್ ಸದಸ್ಯರು, ಜಿಲ್ಲಾ ಪಂಚಾಯತ್ ಸದಸ್ಯರು ಉಪಸ್ಥಿತಿತರಿದ್ದರು.

ಕಾಪು ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವುಡ ಸ್ವಾಗತಿಸಿ,ನಾಗರಾಜ್ ಕಾರ್ಯಕ್ರಮ ನಿರೂಪಿಸಿ, ಲೆಸ್ಟರ್ಡ್ ಕರ್ನಲಿಯೋ ವಂದಿಸಿದರು.