Featured

ಕಾಪುವಿನ ಕಡಲ ಕಿನಾರೆ-ಶ್ರೀ ರವಿಶಂಕರ ಗುರೂಜಿಯ ಆನಂದ ಲಹರಿಯಲ್ಲಿ ತೇಲಿದ ಭಕ್ತಜನಸಾಗರ : vishwanews24

ಕಾಪುವಿನ ಕಡಲ ಕಿನಾರೆ-ಶ್ರೀ ರವಿಶಂಕರ ಗುರೂಜಿಯ ಆನಂದ ಲಹರಿಯಲ್ಲಿ ತೇಲಿದ ಭಕ್ತಜನಸಾಗರ …

ಸಂಘರ್ಷದ ಜೀವನವನ್ನು ಸಂಭ್ರಮದತ್ತ ಜೀವನವನ್ನಾಗಿ ಪರಿವರ್ತಿಸಿಕೊಳ್ಳಿ …

ಕಾಪು: ಇಲ್ಲಿನ ಕಡಲ‌ಕಿನಾರೆಯಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಹೋದರರು ಹಾಗೂ ಆರ್ಟ್ ಆಫ್ ಲೀವಿಂಗ್ ಬಳಗದ ವತಿಯಿಂದ ಆಯೋಜಿಸಲಾದ ಆನಂದ ಲಹರಿ ಕಾರ್ಯಕ್ರಮ ಅದ್ಧೂರಿಯಾಗಿ ಭಕ್ತಿಭಾವದಿಂದ ನಡೆಯಿತು.

ಮೈಸೂರು ಪೇಟ ತೊಡಿಸಿ-ಮಲ್ಲಿಗೆ ಹಾರದಿಂದ ಸ್ವಾಗತಿಸಿ ಸನ್ಮಾನಿಸಿ ಸ್ವಾಗತ ಮಾತುಗಳನ್ನಾಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ “ನನ್ನ ಕ್ಷೇತ್ರದಲ್ಲಿ ಗುರೂಜಿಯ ಸತ್ಸಂಗ ನಡೆಸಿದ್ದು ಜೀವನದ ಸಿರಿಭಾಗ್ಯ,ಸುಮಾರು25-30 ವರ್ಷಗಳ ನಿರಂತರ ನಿಕಟ ನಂಟು ನಮ್ಮ ಸಹೋದರರಿಗೆ ಇದೆ ಗುರೂಜಿಯ ಜತೆಗೆ ಮಾತೃ ಪಿತೃ ಭಾವದ ಬಾಂಧವ್ಯ ಸಿಗುತ್ತಿದೆ ಹಾಗೂ ಈ ದಿನ ಕಾಪುವಿನ ಚರಿತ್ರೆಯಲ್ಲಿ ಇತಿಹಾಸವಾಗುತ್ತೆಂದರು.

ಗುರುದೇವ ಶ್ರೀ ಶ್ರೀ ರವಿಶಂಕರ ಗುರೂಜಿ ಮೊದಲ ಸುತ್ತಿನಲ್ಲಿ ದೇಶದ ಪ್ರವಾಸೋದ್ಯಮ-ಆಯುರ್ವೇದ- ವೈವಿಧ್ಯಮಯ ಆಹಾರ ಖಾಧ್ಯ- ಒಡವೆ ಆಭರಣ- ವಸ್ತ್ರಾಲಂಕಾರ-ಜ್ಞಾನದ ಕುರಿತಾಗಿ ಸವಿಸ್ತಾರವಾದ ಸತ್ಸಂಗ ನಡೆಸಿದರು.

ಮಾನವನ ಶರೀರಕ್ಕೆ ಸಾವಿದ್ದರೂ ಚೈತನ್ಯಕ್ಕೆ ಸಾವಿಲ್ಲ ಅದೂ ನಿರಂತರವಾಗಿ ಹರಿಯುವ ನೀರು ಸಂಘರ್ಷದ ಜೀವನವನ್ನು ಸಂಭ್ರಮದತ್ತ ಜೀವನವನ್ನಾಗಿ ಪರಿವರ್ತಿಸಿಕೊಳ್ಳಬೇಕು ಆ ಸಮಯದಲ್ಲಿ ನಿಜವಾದ ಜೀವನ ಸಿಗುತ್ತದೆಂದರು.

ಈ ಸತ್ಸಂಗವೂ ಕಡಲ ಕಿನಾರೆಯಲ್ಲಿ ನಡೆಯುತ್ತಿದೆ ಬಂದಿರುವ ಎಲ್ಲಾ ಭಕ್ತರ ಕಷ್ಟವನ್ನು ಇಲ್ಲಿಯೇ ಬಿಟ್ಟುಹೋಗಿ ಸಮುದ್ರದೊಡಲು ಸೇರಿಸಿಕೊಂಡು ಹೊಸ ಅಲೆಯ ಮುಖೇನ ನವಚೇತನ ಜೀವನ ಸಿಗುತ್ತದೆಂದರು.

ಈ ಸಂದರ್ಭದಲ್ಲಿ ಕೋಟಾ ಶ್ರೀನಿವಾಸ ಪೂಜಾರಿ,ಬಂಜರ ಪ್ರಕಾಶ್ ಶೆಟ್ಟಿ,ವಾಸುದೇವ ಶೆಟ್ಟಿ, ಯೋಗಿಶ್ ಶೆಟ್ಟಿ ಬಾಲಾಜಿ,ಜಯಕರ ಹೆಗ್ಡೆ,ಡಾ ಚಂದ್ರಶೇಖರ್,ಅಜಯ್ ಪಿ ಶೆಟ್ಟಿ, ಗೀತಾಂಜಲಿ ಸುವರ್ಣ, ವೀಣಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

19 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

20 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

22 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

22 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

23 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

23 hours ago