ಕಾಪು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾಪು ತಾಲೂಕು ವ್ಯಾಪ್ತಿಯ ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಗ್ರಾಮ ಸಹಾಯಕರು ಜತೆಗೂಡಿ ತಾಲೂಕು ಆಡಳಿತ ಕಚೇರಿ ಬಳಿ ಸೆ.26ರ ಗುರುವಾರ ಧರಣಿ ನಡೆಸಿದರು.
ಗ್ರಾಮ ಆಡಳಿತಾಧಿಕಾರಿಗಳ ಸಂಘದ ಅಧ್ಯಕ್ಷ ಡೇನಿಯಲ್ ಡಿ. ಸೋಜ ಮಾತನಾಡಿ, 18 ತಂತ್ರಾಂಶಗಳನ್ನೊಳಗೊಂಡ ಆ್ಯಪ್ ನಿರ್ವಹಣೆಯ ಹೊರೆ, ಪತಿ – ಪತ್ನಿ ಅಂತರ್ ಜಿಲ್ಲಾ ವರ್ಗಾವಣೆಗೆ ತೊಡಕು, ಸರಕಾರಿ ರಜಾದಿನಗಳಲ್ಲಿ ಕೆಲಸ ಮಾಡುವ ಒತ್ತಡ, ಮಾನಸಿಕ ಕಿರಿಕಿರಿ ಹಾಗೂ 20 ವರ್ಷಗಳಾದರೂ ಗ್ರಾಮ ಆಡಳಿತಾಧಿಕಾರಗಳಿಗೆ ಭಡ್ತಿಗೆ ಅವಕಾಶವಿಲ್ಲದಿರುವುದು ಸಹಿತವಾಗಿ ವಿವಿಧ ಬೇಡಿಕೆಗಳನ್ನು ಈಗಾಗಲೇ ಸರಕಾರದ ಮುಂದಿಟ್ಟಿದ್ದೇವೆ. ಆದರೂ ಬೇಡಿಕೆ ಈಡೇರದ ಕಾರಣ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮುಂದಾಗಿದ್ದೇವೆ ಎಂದರು.
ಉಡುಪಿ ಜಿಲ್ಲಾ ಸಂಘದ ಮಾಜಿ ಅಧ್ಯಕ್ಷ ವಿಜಯ್ ಮಾತನಾಡಿ, ಇಂದು ಪ್ರತಿ ತಾಲೂಕಿನಲ್ಲಿ ಧರಣಿ ನಡೆಸಿ, ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಿದ್ದೇವೆ. ನಾಳೆ ಜಿಲ್ಲಾಧಿಕಾರಿ ಕಚೇರಿ, ಬಳಿಕ ಬೆಂಗಳೂರಿನಲ್ಲಿ ಧರಣಿ ನಡೆಸಲಿದ್ದೇವೆ. ನಮಗೆ ನೀಡಿರುವ ಭರವಸೆ ಮತ್ತು ಆಶ್ವಾಸನೆಯನ್ನು ಈಡೇರಿಸುವವರೆಗೂ ಸೇವರಯನ್ನು ಸ್ಥಗಿತಗೊಳಿಸಿ ಧರಣಿಯನ್ನು ಮುಂದುವರಿಸಲಿದ್ದೇವೆ ಎಂದರು.
ಕಾಪು ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿ ಲೋಕನಾಥ ಲಮಾಣಿ, ಉಪಾಧ್ಯಕ್ಷ ಶ್ರೀನಿವಾಸ ಆರ್. ಟಿ., ಜಿಲ್ಲಾ ಪ್ರತಿನಿಧಿ ಜಗದೀಶ್ ಸೇರಿದಂತೆ ಗ್ರಾಮ ಆಡಳಿತಾಧಿಕಾರಿಗಳು, ಗ್ರಾಮ ಸಹಾಯಕರು ಧರಣಿಯಲ್ಲಿ ಪಾಲ್ಗೊಂಡಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…