ಕಾಪು: ಸಮಾಜರತ್ನ ಕೆ. ಲೀಲಾಧರ ಶೆಟ್ಟಿ (68) ಮತ್ತು ಅವರ ಪತ್ನಿ ವಸುಂಧರಾ ಎಲ್. ಶೆಟ್ಟಿ (59) ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅವರ ಸಾಕುಪುತ್ರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಸಾಕುಪುತ್ರಿ ಮನೆ ಬಿಟ್ಟು ಹೋದ ವಿಷಯಕ್ಕೆ ನೊಂದು ಈ ದಂಪತಿ ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಲೀಲಾಧರ ಶೆಟ್ಟಿ ದಂಪತಿಯ ಸಾಕು ಮಗಳು ಈ ಹಿಂದೆ ಮನೆ ಕೆಲಸಕ್ಕೆಂದು ಬಂದಿದ್ದಾತನೊಂದಿಗೆ ತೆರಳಿರುವ ಶಂಕೆ ವ್ಯಕ್ತ ಪಡಿಸಿ ಪೊಲೀಸರಿಗೆ ದೂರು ನೀಡಲಾಗಿತ್ತು. ಅದರಂತೆ ಆಕೆಯ ಪತ್ತೆಗಾಗಿ ಕಾಪು ಪೊಲೀಸರು ತನಿಖೆ ನಡೆಸುತ್ತಿದ್ದು, ಎರಡು ತಂಡಗಳನ್ನು ರಚಿಸಿದ್ದಾರೆ. ಜಿಲ್ಲೆ, ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಲ್ಲೂ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಡೆತ್ ನೋಟ್ನಲ್ಲಿ ಏನೇನಿತ್ತು ?
ಲೀಲಾಧರ ಶೆಟ್ಟಿ ಅವರು ಸಾವಿಗೆ ಮೊದಲು ಡೆತ್ ನೋಟ್ ಬರೆದಿಟ್ಟಿದ್ದು ಅದರ ವಿವರ ಅಧಿಕೃತವಾಗಿ ಬಹಿರಂಗವಾಗಿಲ್ಲ. “ನನ್ನನ್ನು ಕ್ಷಮಿಸಿ, ಪ್ರಾಣಕ್ಕಿಂತ ಮಾನ ಮುಖ್ಯ. ಯಾರ್ಯಾರಿಗೆ ಎಷ್ಟು ಸಾಲ ಕೊಡಬೇಕಿದೆ ಮತ್ತು ಅವರ ದೂರವಾಣಿ ಸಂಖ್ಯೆ ಇಲ್ಲಿದೆ. ಎಲ್ಐಸಿ ಕಮೀಷನ್ನಿಂದ ಬರುವ ಹಣದಲ್ಲಿ ಸಂದಾಯ ಮಾಡಿ. ತಾನು ಕಲಿತ ಕರಂದಾಡಿ ಶಾಲೆಯನ್ನು ಅಭಿವೃದ್ಧಿ ಪಡಿಸಿ, ಅಲ್ಲಿನ ಮಕ್ಕಳ ಬಗ್ಗೆ ಪ್ರೀತಿ ತೋರಿ. ಬಾಕಿ ಇರುವ ಊರಿನ ವಿವಿಧ ಅಭಿವೃದ್ಧಿ ಕೆಲಸಗಳನ್ನು ಶೀಘ್ರ ಮುಗಿಸಿ’ ಎಂದು ಪತ್ರದಲ್ಲಿ ಬರೆದಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…