ಕಾಪು: ಸಮಾಜರತ್ನ ಕೆ. ಲೀಲಾಧರ ಶೆಟ್ಟಿ (68) ಮತ್ತು ಅವರ ಪತ್ನಿ ವಸುಂಧರಾ ಎಲ್. ಶೆಟ್ಟಿ (59) ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅವರ ಸಾಕುಪುತ್ರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಸಾಕುಪುತ್ರಿ ಮನೆ ಬಿಟ್ಟು ಹೋದ ವಿಷಯಕ್ಕೆ ನೊಂದು ಈ ದಂಪತಿ ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಲೀಲಾಧರ ಶೆಟ್ಟಿ ದಂಪತಿಯ ಸಾಕು ಮಗಳು ಈ ಹಿಂದೆ ಮನೆ ಕೆಲಸಕ್ಕೆಂದು ಬಂದಿದ್ದಾತನೊಂದಿಗೆ ತೆರಳಿರುವ ಶಂಕೆ ವ್ಯಕ್ತ ಪಡಿಸಿ ಪೊಲೀಸರಿಗೆ ದೂರು ನೀಡಲಾಗಿತ್ತು. ಅದರಂತೆ ಆಕೆಯ ಪತ್ತೆಗಾಗಿ ಕಾಪು ಪೊಲೀಸರು ತನಿಖೆ ನಡೆಸುತ್ತಿದ್ದು, ಎರಡು ತಂಡಗಳನ್ನು ರಚಿಸಿದ್ದಾರೆ. ಜಿಲ್ಲೆ, ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಲ್ಲೂ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಡೆತ್ ನೋಟ್ನಲ್ಲಿ ಏನೇನಿತ್ತು ?
ಲೀಲಾಧರ ಶೆಟ್ಟಿ ಅವರು ಸಾವಿಗೆ ಮೊದಲು ಡೆತ್ ನೋಟ್ ಬರೆದಿಟ್ಟಿದ್ದು ಅದರ ವಿವರ ಅಧಿಕೃತವಾಗಿ ಬಹಿರಂಗವಾಗಿಲ್ಲ. “ನನ್ನನ್ನು ಕ್ಷಮಿಸಿ, ಪ್ರಾಣಕ್ಕಿಂತ ಮಾನ ಮುಖ್ಯ. ಯಾರ್ಯಾರಿಗೆ ಎಷ್ಟು ಸಾಲ ಕೊಡಬೇಕಿದೆ ಮತ್ತು ಅವರ ದೂರವಾಣಿ ಸಂಖ್ಯೆ ಇಲ್ಲಿದೆ. ಎಲ್ಐಸಿ ಕಮೀಷನ್ನಿಂದ ಬರುವ ಹಣದಲ್ಲಿ ಸಂದಾಯ ಮಾಡಿ. ತಾನು ಕಲಿತ ಕರಂದಾಡಿ ಶಾಲೆಯನ್ನು ಅಭಿವೃದ್ಧಿ ಪಡಿಸಿ, ಅಲ್ಲಿನ ಮಕ್ಕಳ ಬಗ್ಗೆ ಪ್ರೀತಿ ತೋರಿ. ಬಾಕಿ ಇರುವ ಊರಿನ ವಿವಿಧ ಅಭಿವೃದ್ಧಿ ಕೆಲಸಗಳನ್ನು ಶೀಘ್ರ ಮುಗಿಸಿ’ ಎಂದು ಪತ್ರದಲ್ಲಿ ಬರೆದಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…