Featured

ಕಾಪು:ಸಮಾಜರತ್ನ ಲೀಲಾಧರ ಶೆಟ್ಟಿ ದಂಪತಿಯ ಆತ್ಮಹತ್ಯೆ ಪ್ರಕರಣ – ಸಾಕು ಮಗಳಿಗಾಗಿ ಮುಂದುವರಿದ ಶೋಧ ಕಾರ್ಯ – vishwanews24

ಕಾಪು:ಸಮಾಜರತ್ನ ಲೀಲಾಧರ ಶೆಟ್ಟಿ ದಂಪತಿಯ ಆತ್ಮಹತ್ಯೆ ಪ್ರಕರಣ- ಸಾಕು ಮಗಳಿಗಾಗಿ ಮುಂದುವರಿದ ಶೋಧ ಕಾರ್ಯ

ಕಾಪು: ಸಮಾಜರತ್ನ ಕೆ. ಲೀಲಾಧರ ಶೆಟ್ಟಿ (68) ಮತ್ತು ಅವರ ಪತ್ನಿ ವಸುಂಧರಾ ಎಲ್‌. ಶೆಟ್ಟಿ (59) ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅವರ ಸಾಕುಪುತ್ರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಸಾಕುಪುತ್ರಿ ಮನೆ ಬಿಟ್ಟು ಹೋದ ವಿಷಯಕ್ಕೆ ನೊಂದು ಈ ದಂಪತಿ ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಲೀಲಾಧರ ಶೆಟ್ಟಿ ದಂಪತಿಯ ಸಾಕು ಮಗಳು ಈ ಹಿಂದೆ ಮನೆ ಕೆಲಸಕ್ಕೆಂದು ಬಂದಿದ್ದಾತನೊಂದಿಗೆ ತೆರಳಿರುವ ಶಂಕೆ ವ್ಯಕ್ತ ಪಡಿಸಿ ಪೊಲೀಸರಿಗೆ ದೂರು ನೀಡಲಾಗಿತ್ತು. ಅದರಂತೆ ಆಕೆಯ ಪತ್ತೆಗಾಗಿ ಕಾಪು ಪೊಲೀಸರು ತನಿಖೆ ನಡೆಸುತ್ತಿದ್ದು, ಎರಡು ತಂಡಗಳನ್ನು ರಚಿಸಿದ್ದಾರೆ. ಜಿಲ್ಲೆ, ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಲ್ಲೂ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಡೆತ್‌ ನೋಟ್‌ನಲ್ಲಿ ಏನೇನಿತ್ತು ?

ಲೀಲಾಧರ ಶೆಟ್ಟಿ ಅವರು ಸಾವಿಗೆ ಮೊದಲು ಡೆತ್‌ ನೋಟ್‌ ಬರೆದಿಟ್ಟಿದ್ದು ಅದರ ವಿವರ ಅಧಿಕೃತವಾಗಿ ಬಹಿರಂಗವಾಗಿಲ್ಲ. “ನನ್ನನ್ನು ಕ್ಷಮಿಸಿ, ಪ್ರಾಣಕ್ಕಿಂತ ಮಾನ ಮುಖ್ಯ. ಯಾರ್ಯಾರಿಗೆ ಎಷ್ಟು ಸಾಲ ಕೊಡಬೇಕಿದೆ ಮತ್ತು ಅವರ ದೂರವಾಣಿ ಸಂಖ್ಯೆ ಇಲ್ಲಿದೆ. ಎಲ್‌ಐಸಿ ಕಮೀಷನ್‌ನಿಂದ ಬರುವ ಹಣದಲ್ಲಿ ಸಂದಾಯ ಮಾಡಿ. ತಾನು ಕಲಿತ ಕರಂದಾಡಿ ಶಾಲೆಯನ್ನು ಅಭಿವೃದ್ಧಿ ಪಡಿಸಿ, ಅಲ್ಲಿನ ಮಕ್ಕಳ ಬಗ್ಗೆ ಪ್ರೀತಿ ತೋರಿ. ಬಾಕಿ ಇರುವ ಊರಿನ ವಿವಿಧ ಅಭಿವೃದ್ಧಿ ಕೆಲಸಗಳನ್ನು ಶೀಘ್ರ ಮುಗಿಸಿ’ ಎಂದು ಪತ್ರದಲ್ಲಿ ಬರೆದಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago