ಕಾಪು: ಗ್ರಾಹಕನ ಸೋಗಿನಲ್ಲಿ ಬಂದು ಅಂಗಡಿ ಮುಚ್ಚಿ ಮನೆಗೆ ತೆರಳುತ್ತಿದ್ದ ಮಾಲಕನಿಂದ ಆರು ಲಕ್ಷ ರೂ. ನಗದು ದೋಚಿ ಪರಾರಿಯಾದ ಘಟನೆ ಗುರುವಾರ ರಾತ್ರಿ ಕಾಪುವಿನಲ್ಲಿ ನಡೆದಿದೆ.
ಕಾಪು ಮಹಾಲಸಾ ಸ್ಟೋರ್ ಮಾಲಕ ರಾಘವೇಂದ್ರ ಕಿಣಿ ಹಣ ಕಳೆದುಕೊಂಡಿದ್ದು, ಕಾಪು ಪೊಲೀಸ್ ಠಾಣೆಗೆ ಹಣ ಕಳೆದುಕೊಂಡ ಬಗ್ಗೆ ದೂರು ನೀಡಿದ್ದಾರೆ.
ಕಾಪು ಪೇಟೆಯಲ್ಲಿ ಹಾರ್ಡ್ ವೇರ್, ಹಾಲಿನ ವ್ಯಾಪಾರ ಸಹಿತ ಉದ್ಯಮವನ್ನು ಹೊಂದಿರುವ ರಾಘವೇಂದ್ರ ಕಿಣಿ ಗುರುವಾರ ರಾತ್ರಿ ಮಳಿಗೆಗೆ ಬೀಗ ಹಾಕಿ ಮನೆಗೆ ತೆರಳಲು ಸಿದ್ಧರಾಗುತ್ತಿದ್ದ ವೇಳೆ ಗ್ರಾಹಕನ ಸೋಗಿನಲ್ಲಿ ಬಂದ ಅಪರಿಚಿತ ಈ ದುಷ್ಕೃತ್ಯವೆಸಗಿದ್ದಾನೆ.
ಮನೆಗೆ ತೆರಳುವ ಮುನ್ನ 3-4 ದಿನದ ವ್ಯವಹಾರದ ಸುಮಾರು 6 ಲಕ್ಷ ರೂ. ನಗದನ್ನು ಸ್ಕೂಟಿಯಲ್ಲಿ ಇರಿಸಿ, ಅಂಗಡಿಗೆ ಬೀಗ ಹಾಕಲು ತೆರಳಿದ್ದ ವೇಳೆ ಕರಾಮತ್ತು ತೋರಿದ ಕಳ್ಳರು ಸ್ಕೂಟಿ ಪಂಕ್ಚರ್ ಮಾಡಿ ನಗದು ದೋಚಿ ಪರಾರಿಯಾಗಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…