ಕಾಪು : ಮಂಗಳವಾರ ಮಲ್ಲಾರು ಗುಡ್ಡೆಕೇರಿಯಲ್ಲಿನ ಅಕ್ರಮ ಜಾನವಾರು ವಧಾ ಕೇಂದ್ರಕ್ಕೆ ಧಾಳಿ ನಡೆಸಿದ ಕಾಪು ಪೊಲೀಸರು ಕಟುಕರ ಕೈಗೆ ಬಲಿಯಾಗಬೇಕಿದ್ದ 10 ಜಾನುವಾರುಗಳನ್ನು ರಕ್ಷಿಸಿದ್ದಾರೆ.
ಪೊಲೀಸರ ಕಾರ್ಯಾಚರಣೆಯ ವೇಳೆ 31 ಸಾವಿರ ಮೌಲ್ಯದ ಹತ್ತು ದನ – ಕರುಗಳು ಮತ್ತು ವಧೆಗೆ ಬಳಸುತ್ತಿದ್ದ ಸಾಮಾಗ್ರಿಗಳು ಹಾಗೂ ಆರೋಪಿಗಳು ನಿಲ್ಲಿಸಿದ್ದ ಬೈಕ್ನ್ನು ವಶಪಡಿಸಿಕೊಳ್ಳಲಾಗಿದೆ.
ಕಾಪು ಎಸ್ಐ ರಾಜಶೇಖರ್ ಬಿ. ಸಾಗನೂರು ಅವರಿಗೆ ಬೀಟ್ ಪೊಲೀಸ್ ಸಿಬಂದಿಯ ಮೂಲಕ ದೊರಕಿದ ಖಚಿತ ಮಾಹಿತಿಯ ಮೇರೆಗೆ ಸಿಬಂದಿಗಳಾದ ರವೀಂದ್ರ, ಅರುಣ್, ಮಂಜುನಾಥ, ಆನಂದ್, ಸಂದೇಶ, ಪರಶುರಾಮ ಅವರು ಜೊತೆ ಸೇರಿ ಕಾರ್ಯಚರಣೆ ನಡೆಸಿದ್ದರು.
ಅಕ್ರಮ ವಧಾ ಕೇಂದ್ರವನ್ನು ನಡೆಸುತ್ತಿದ್ದ ಅಬ್ದುಲ್ ಸತ್ತಾರ್, ನಾಜಿಮ್, ಶಂಶುದ್ದೀನ್, ಹಸನಬ್ಬ, ಶಾಹಿದ್, ಆರಿಫ್ ಸಹಿತ ಸ್ಥಳದಲ್ಲಿದ್ದ ಎಂಟು ಮಂದಿ ಆರೋಪಿಗಳು ಪೊಲೀಸರನ್ನು ಕಂಡು ಪರಾರಿಯಾಗಿದ್ದಾರೆ.
ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ. ಪೊಲೀಸರು ರಕ್ಷಿಸಿದ ದನಗಳನ್ನು ನೀಲಾವರ ಗೋಶಾಲೆಗೆ ಸ್ಥಳಾಂತರಿಸಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…