ಕಾಪು : ಮಂಗಳವಾರ ಮಲ್ಲಾರು ಗುಡ್ಡೆಕೇರಿಯಲ್ಲಿನ ಅಕ್ರಮ ಜಾನವಾರು ವಧಾ ಕೇಂದ್ರಕ್ಕೆ ಧಾಳಿ ನಡೆಸಿದ ಕಾಪು ಪೊಲೀಸರು ಕಟುಕರ ಕೈಗೆ ಬಲಿಯಾಗಬೇಕಿದ್ದ 10 ಜಾನುವಾರುಗಳನ್ನು ರಕ್ಷಿಸಿದ್ದಾರೆ.
ಪೊಲೀಸರ ಕಾರ್ಯಾಚರಣೆಯ ವೇಳೆ 31 ಸಾವಿರ ಮೌಲ್ಯದ ಹತ್ತು ದನ – ಕರುಗಳು ಮತ್ತು ವಧೆಗೆ ಬಳಸುತ್ತಿದ್ದ ಸಾಮಾಗ್ರಿಗಳು ಹಾಗೂ ಆರೋಪಿಗಳು ನಿಲ್ಲಿಸಿದ್ದ ಬೈಕ್ನ್ನು ವಶಪಡಿಸಿಕೊಳ್ಳಲಾಗಿದೆ.
ಕಾಪು ಎಸ್ಐ ರಾಜಶೇಖರ್ ಬಿ. ಸಾಗನೂರು ಅವರಿಗೆ ಬೀಟ್ ಪೊಲೀಸ್ ಸಿಬಂದಿಯ ಮೂಲಕ ದೊರಕಿದ ಖಚಿತ ಮಾಹಿತಿಯ ಮೇರೆಗೆ ಸಿಬಂದಿಗಳಾದ ರವೀಂದ್ರ, ಅರುಣ್, ಮಂಜುನಾಥ, ಆನಂದ್, ಸಂದೇಶ, ಪರಶುರಾಮ ಅವರು ಜೊತೆ ಸೇರಿ ಕಾರ್ಯಚರಣೆ ನಡೆಸಿದ್ದರು.
ಅಕ್ರಮ ವಧಾ ಕೇಂದ್ರವನ್ನು ನಡೆಸುತ್ತಿದ್ದ ಅಬ್ದುಲ್ ಸತ್ತಾರ್, ನಾಜಿಮ್, ಶಂಶುದ್ದೀನ್, ಹಸನಬ್ಬ, ಶಾಹಿದ್, ಆರಿಫ್ ಸಹಿತ ಸ್ಥಳದಲ್ಲಿದ್ದ ಎಂಟು ಮಂದಿ ಆರೋಪಿಗಳು ಪೊಲೀಸರನ್ನು ಕಂಡು ಪರಾರಿಯಾಗಿದ್ದಾರೆ.
ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ. ಪೊಲೀಸರು ರಕ್ಷಿಸಿದ ದನಗಳನ್ನು ನೀಲಾವರ ಗೋಶಾಲೆಗೆ ಸ್ಥಳಾಂತರಿಸಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…