ಕಾಪು : ಮಲ್ಲಾರು ಗ್ರಾಮದ ಬಡಗರ ಗುತ್ತು ಎಂಬಲ್ಲಿನ ಅಕ್ರಮ ಕಸಾಯಿ ಖಾನೆಗೆ ಇಂದು ಬೆಳಿಗ್ಗೆ ಪೊಲೀಸರು ದಾಳಿ ಮಾಡಿದ್ದಾರೆ.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಮಲ್ಲಾರು ಗ್ರಾಮದ ಬಡಗರ ಗುತ್ತು ಎಂಬಲ್ಲಿಗೆ ಇಂದು ಬೆಳಿಗ್ಗೆ ತಲುಪಿ ಅಲ್ಲಿನ ಫ್ಯಾಕ್ಟರಿಯ ಸಮೀಪ ಮರೆಯಲ್ಲಿ ನಿಂತು ನೋಡಿದಾಗಿ ಫ್ಯಾಕ್ಟರಿಯ ಹಿಂಭಾಗದ ಹಾಡಿಯಲ್ಲಿ ಇಬ್ಬರು ವ್ಯಕ್ತಿಗಳು ಸೇರಿಕೊಂಡು ದನದ ಮಾಂಸವನ್ನು ಕಟಾವು ಮಾಡುತ್ತಿರುವುದು ಕಂಡುಬಂದಿದೆ.
ಕೂಡಲೇ ಪೊಲೀಸರು ಸ್ಥಳಕ್ಕೆ ದಾಳಿ ಮಾಡಿದ್ದು, ಈ ವೇಳೆ ಕಾಪುವಿನ ಭಾರತ್ ನಗರದ ನಿವಾಸಿ ಮೊಹಮ್ಮದ್ ಆರೀಫ್ ಹಾಗೂ ಇನ್ನೋರ್ವ ಪರಾರಿಯಾಗಿದ್ದಾರೆ. ಸ್ಥಳದಲ್ಲಿ ಇದ್ದ ಸುಮಾರು 200 ಕೆಜಿಯಷ್ಟು ದನದ ಮಾಂಸ, ಕೃತ್ಯಕ್ಕೆ ಬಳಸಿದ ಮಾರಕಾಯುಧ ಹಾಗೂ ಇತರ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…