ಕಾಪು: ಉಳಿಯಾರಗೋಳಿ ಗ್ರಾಮದ ಕೈಪುಂಜಾಲು ಸಂಕು ತೋಟ ಎನ್ನುವಲ್ಲಿ ಹರಿಯುವ ಪಾಪನಾಶಿನಿ ನದಿಯಿಂದ ಮರಳು ಅಕ್ರಮವಾಗಿ ಸಂಗ್ರಹಿಸುತ್ತಿದ್ದ ಪ್ರಕರಣವನ್ನು ಕಾಪು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಅಕ್ರಮವಾಗಿ ಮರಳು ಸಂಗ್ರಹಿಸುತ್ತಿರುವ ಬಗ್ಗೆ ಬಂದ ಮಾಹಿತಿಯಂತೆ ಪೊಲೀಸರು ಬುಧವಾರ ಮುಂಜಾನೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದರು. ಈ ಸಂದರ್ಭ ನದಿಯ ಪೂರ್ವ ಬದಿಯ ದಡದಲ್ಲಿ ಮರಳನ್ನು ಸಂಗ್ರಹಿಸಿರುವುದು ಪತ್ತೆಯಾಗಿತ್ತು.
ಅಲ್ಲಿದ್ದ ವ್ಯಕ್ತಿ ಪೊಲೀಸರನ್ನು ಕಂಡು ನದಿಗೆ ಹಾರಿ ನದಿ ದಾಟಿಕೊಂಡು ಪರಾರಿಯಾಗಿದ್ದಾನೆ. ಆತನನ್ನು ಪಾಂಗಾಳ ನಿವಾಸಿ ಪ್ರಸಾದ್ ಎಂದು ಗುರುತಿಸಲಾಗಿದೆ. ಸ್ಥಳದಲ್ಲಿದ್ದ ಮರಳನ್ನು ತೆಗೆಯುವ ಸಲಕರಣೆಗಳನ್ನು ಮತ್ತು ಅಂದಾಜು 4 ಯೂನಿಟ್ನಷ್ಟು ಮರಳನ್ನು ಜಪ್ತಿ ಮಾಡಲಾಗಿದೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…