ಕಾಪು: ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಆರೋಪದಲ್ಲಿ ಮೂವರನ್ನು ಟೆಂಪೋ ಸಹಿತ ಕಾಪು ಪೊಲೀಸರು ಬಂಧಿಸಿರುವ ಘಟನೆ ಸೆ.14ರಂದು ಮಣಿಪುರ ಗ್ರಾಮದ ದೆಂದೂರುಕಟ್ಟೆ ಎಂಬಲ್ಲಿ ನಡೆದಿದೆ.
ಚಾಲಕ ಕರಂಬಳ್ಳಿಯ ನಜೀರ್(42), ಕುರ್ಕಾಲಿನ ಜೀವನ್ ಶೆಟ್ಟಿ(38) ಹಾಗೂ ಮಿಥುನ್ ಶೆಟ್ಟಿ(32) ಬಂಧಿತ ಆರೋಪಿಗಳು.
ಜೀವನ್ ಶೆಟ್ಟಿ ಇತ್ತೀಚೆಗೆ ಪಾಂಗಾಳ ಹೊಳೆಯಲ್ಲಿ ಮರಳನ್ನು ತೆಗೆಸಿ ಅವರ ಜಾಗದಲ್ಲಿ ಸಂಗ್ರಹ ಮಾಡಿ ಇಟ್ಟುಕೊಂಡಿದ್ದು, ಅದನ್ನು ಟೆಂಪೋದಲ್ಲಿ ತುಂಬಿಸಿ ಸಾಗಿಸುತ್ತಿದ್ದಾಗ ಕಾಪು ಎಸ್ಸೈ ಅಬ್ದುಲ್ ಖಾದರ್ ನೇತೃತ್ವದ ತಂಡ ದಾಳಿ ನಡೆಸಿದೆ.
ಮರಳು ಸಾಗಿಸುತ್ತಿದ್ದ 407ಟೆಂಪೋ ಮತ್ತು ಅದರಲ್ಲಿದ್ದ 9,000ರೂ. ಮೌಲ್ಯದ ಮರಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…