ಕಾಪು: ಕಾಪು ಕಡಲ ಕಿನಾರೆಯಲ್ಲಿ ತಮಿಳುನಾಡು ಮೂಲದ ಮೀನುಗಾರರ ದೋಣಿ ಸ್ಥಳೀಯ ಮೀನುಗಾರರ ಸಣ್ಣ ದೋಣಿಗೆ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದು, ಇಬ್ಬರು ಮೀನುಗಾರರು ಸಮುದ್ರಕ್ಕೆ ಬಿದ್ದು ಒಬ್ಬರು ನಾಪತ್ತೆಯಾಗಿರುವ ಘಟನೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾಪು ಕ್ಷೇತ್ರ ಸಮಿತಿ ತೀವ್ರ ಖಂಡನೆ ವ್ಯಕ್ತಪಡಿಸುತ್ತದೆ.
ಕಳೆದ ಕೆಲವು ದಿನಗಳಿಂದ ತಮಿಳುನಾಡು ಮೂಲದ ಮೀನುಗಾರರು ಅಕ್ರಮ ಅಜಿರ್ (ಪಾಚ್ಚಾಲೆ) ಮೀನುಗಾರಿಕೆ ನಡೆಸುತ್ತಿರುವುದಾಗಿ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಸ್ಥಳೀಯ ಮೀನುಗಾರರು ಶಾಂತಿಯುತವಾಗಿ ಅವರೊಂದಿಗೆ ಮಾತನಾಡಲು ತೆರಳಿದ ಸಂದರ್ಭದಲ್ಲಿ ಈ ರೀತಿಯ ಕ್ರೂರ ಹಾಗೂ ಅಮಾನುಷ ಕೃತ್ಯ ಎಸಗಿರುವುದು ಅತ್ಯಂತ ಖಂಡನೀಯವಾಗಿದೆ.
ಇದನ್ನೂ ಓದಿ:
ಈ ಘಟನೆಯ ಪರಿಣಾಮವಾಗಿ ಸ್ಥಳೀಯ ಮೀನುಗಾರರ ದೋಣಿ ಮುಗುಚಿ, ಇಬ್ಬರು ಮೀನುಗಾರರು ನೀರಿಗೆ ಬಿದ್ದಿದ್ದು, ಒಬ್ಬರನ್ನು ರಕ್ಷಿಸಲಾಗಿದ್ದರೂ ಇನ್ನೊಬ್ಬ ಮೀನುಗಾರ ಇನ್ನೂ ನಾಪತ್ತೆಯಾಗಿರುವುದು ಆತಂಕಕಾರಿ ಸಂಗತಿಯಾಗಿದೆ.
ಈ ಹಿನ್ನೆಲೆಯಲ್ಲಿ, ಎಸ್ ಡಿ ಪಿ ಐ ಸರ್ಕಾರ ಮತ್ತು ಸಂಬಂಧಿತ ಅಧಿಕಾರಿಗಳನ್ನು ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತದೆ. ನಾಪತ್ತೆಯಾಗಿರುವ ಮೀನುಗಾರರಿಗಾಗಿ ಶೋಧ ಕಾರ್ಯವನ್ನು ತೀವ್ರಗೊಳಿಸಿ, ತಪ್ಪಿತಸ್ಥರನ್ನು ಶೀಘ್ರದಲ್ಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ, ಅಕ್ರಮ ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಲ್ಲಿಸುವುದರೊಂದಿಗೆ ಸ್ಥಳೀಯ ಮೀನುಗಾರರ ಭದ್ರತೆಯನ್ನು ಖಚಿತಪಡಿಸಬೇಕು.
ಪಕ್ಷವು ಪೀಡಿತ ಕುಟುಂಬದ ಜೊತೆ ನಿಂತಿದ್ದು, ಅವರಿಗೆ ಅಗತ್ಯ ಪರಿಹಾರ ಮತ್ತು ಸಹಾಯವನ್ನು ಒದಗಿಸುವಂತೆ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಎಸ್ ಡಿ ಪಿ ಐ ಕಾಪು ಕ್ಷೇತ್ರ ಸಮಿತಿ ಅಧ್ಯಕ್ಷರಾದ ಸಾದಿಕ್ ಕೆ ಪಿ ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಇದನ್ನೂ ಓದಿ:
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…