ಕಾಪು: ಅದಮಾರು ಮತ್ತು ಎರ್ಮಾಳು ಮೂಡಬೆಟ್ಟು ಪ್ರದೇಶದಲ್ಲಿ ಕಳೆದೆರಡು ದಿನಗಳಿಂದ ರಾತ್ರಿ ಸಮಯ ರಸ್ತೆಯಲ್ಲಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಅಟೋ ರಿಕ್ಷಾದಲ್ಲಿ ಹೋಗುತ್ತಿದ್ದ ವೇಳೆ ಎರ್ಮಾಳು ಅದಮಾರು ರಸ್ತೆಯ ಮೂಡಬೆಟ್ಟು ಸಮೀಪದಲ್ಲಿ ಚಿರತೆ ಸಂಚರಿಸುತ್ತಿರುವುದು ಕಂಡು ಬಂದಿದೆ.
ಚಿರತೆ ನೋಡಿದವರು ನೀಡಿದ ಮಾಹಿತಿಯಂತೆ ಸ್ಥಳೀಯರು ಪೊಲೀಸ್ ಹಾಗೂ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ.
ಅದಮಾರು, ಎರ್ಮಾಳು ಪರಿಸರವು ಶಾಲಾ ಮಕ್ಕಳು ಸಂಚರಿಸುವ ಪ್ರದೇಶವಾಗಿದೆ. ಇಲ್ಲಿನ ಜನತೆ ಕೃಷಿ, ಹೈನುಗಾರಿಕೆಯಿಂದ ಜೀವನ ನಡೆಸುತ್ತಿದ್ದು, ದನಗಳನ್ನು ಹೊರಗೆ ಬಿಡಲು ಹೆದರುವಂತಾಗಿದೆ. ದಟ್ಟ ಪೊದೆಗಳಿಂದ ಕೂಡಿರುವ ಪ್ರದೇಶಗಳಲ್ಲಿ ಜನ ಸಂಚರಿಸಲು ಹೆದರುವಂತಾಗಿದೆ ಎಂದು ಸ್ಥಳೀಯರಾದ ಬರ್ಪಾಣಿ ಸಂತೋಷ್ ಶೆಟ್ಟಿ ತಿಳಿಸಿದ್ದಾರೆ.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …