ಕಾಪು: ಉಳಿಯಾರಗೋಳಿ ಗ್ರಾಮದ ಬಳಿ ಎ.3 ರಂದು ಬೆಳಗ್ಗೆ ಅನುಮತಿ ಪಡೆಯದೆ ಕಾರಿನಲ್ಲಿ ಬಿಜೆಪಿ ಧ್ವಜವನ್ನು ಕಟ್ಟಿಕೊಂಡು ಚುನಾವಣಾ ಪ್ರಚಾರ ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರಿನಲ್ಲಿ ಚುನಾವಣೆಗೆ ಸಂಬಧಿಸಿದ ಬಾವುಟ ಹಾಗೂ ಇತರ ವಸ್ತುಗಳನ್ನು ಸಾಗಾಟ ಮಾಡಲು ಸಿದ್ಧವಾಗುತ್ತಿರುವ ಬಗ್ಗೆ ಸಿವಿಜಿಲ್ ಆ್ಯಪ್ನಲ್ಲಿ ದೂರು ಬಂದಿದ್ದು, ಅದರಂತೆ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ಉಮೇಶ್ ತಂಡ ಕಾರ್ಯಾಚರಣೆ ನಡೆಸಿತ್ತು.
ಚಾಲಕ ಕಾರನ್ನು ಕಮಲದ ಚಿಹ್ನೆ ಇರುವ ದೊಡ್ಡ ಬಾವುಟವನ್ನು ನೊಂದಣಿ ನಂಬ್ರ ಕಾಣದಂತೆ ಕಟ್ಟಿಕೊಂಡು ರಸ್ತೆಯಲ್ಲಿ ತೀವ್ರ ನಿರ್ಲಕ್ಷ್ಯತನ ಹಾಗೂ ದುಡುಕುತನದಿಂದ ಮಾನವ ಜೀವಕ್ಕೆ ಹಾನಿಯಾಗುವ ರೀತಿಯಲ್ಲಿ ಅಡ್ಡಾದಿಡ್ಡಿಯಾಗಿ ಚಲಾಯಿಸಿಕೊಂಡು ಹೋಗುತ್ತಿದ್ದು, ಫ್ಲೈಯಿಂಗ್ ಸ್ಕ್ವಾಡ್ನ ಕಾರು ಹತ್ತಿರಕ್ಕೆ ಹೋಗುತ್ತಿದ್ದಂತೆ ಅದರ ಚಾಲಕನು ಮಾಳವಿಕಾ ರೆಸಿಡೆನ್ಸಿ ಎದುರಿನ ಅಂಗಳದಲ್ಲಿ ಕಾರನ್ನು ನಿಲ್ಲಿಸಿ ಪರಾರಿಯಾಗಿದ್ದಾನೆ ಎಂದು ದೂರಲಾಗಿದೆ.
ಕಾರಿನ ಚಾಲಕನು ಪಕ್ಷದ ಚಿಹ್ನೆಗಳನ್ನು ಬಳಸಿ ಚುನಾವಣಾ ಪ್ರಚಾರ ಮಾಡಲು ಚುನಾವಣಾಧಿಕಾರಿಗಳಿಂದ ಯಾವುದೇ ಅನುಮತಿಯನ್ನು ಪಡೆದುಕೊಳ್ಳದೇ, ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…