ಉಡುಪಿ: ಭಿನ್ನ ಕೋಮಿಗೆ ಸೇರಿದ ಯುವಕ ಮತ್ತು ಯುವತಿ ಬೈಕಿನಲ್ಲಿ ತೆರಳುತ್ತಿದ್ದಾಗ ಕೆಲವು ಯುವಕರು ತಡೆದು ನಿಲ್ಲಿಸಿ ಬೆದರಿಸಿದ ಘಟನೆಯ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ತಿಂಗಳ 22 ರಂದು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಸಿರಿಮನೆ ಫಾಲ್ಸ್ ಗೆ ತೆರಳಿದ್ದ ಕಾಪು ಮೂಲದ ಯುವಕ ಮತ್ತು ಯುವತಿ ಹಿಂದಕ್ಕೆ ಬರುವಾಗ ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದು ನಿಲ್ಲಿಸಿ ವಿಚಾರಣೆ ನಡೆಸಿದ್ದರು. ಈ ಸಂದರ್ಭದಲ್ಲಿ ಯುವತಿ ತಮ್ಮನ್ನು ಬಿಟ್ಟುಬಿಡುವಂತೆ, ತಮ್ಮ ವಿಡಿಯೋ ಮಾಡದಂತೆ ಯುವಕರಲ್ಲಿ ವಿನಂತಿ ಮಾಡಿದ್ದರೂ ಬಿಡದೆ ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. ಬಳಿಕ ಯುವಕ ಮತ್ತು ಯವತಿಯ ಕುಟುಂಬದ ಸದಸ್ಯರ ಸಮ್ಮುಖ ಮಾತುಕತೆ ನಡೆದು ಎರಡು ಕುಟುಂಬದವರು ಪರಿಚಯಸ್ಥರಾಗಿರುವ ಕಾರಣ ನಮಗೆ ಯಾವುದೇ ರೀತಿಯ ಅನುಮಾನ ಯುವಕನ ಮೇಲೆ ಇಲ್ಲ ಎಂದು ಪ್ರಕರಣ ದಾಖಲಿಸಿದೆ ವಾಪಾಸಾಗಿದ್ದರು.
ಘಟನೆಯ ವೇಳೆ ಸಂಘಟನೆಯ ಯುವಕರು ವೀಡಿಯೋ ಮಾಡಿಕೊಂಡಿದ್ದು ಅದನ್ನು ಪೊಲೀಸರು ಆ ವೇಳೆ ಡಿಲಿಟ್ ಮಾಡಿರಲಿಲ್ಲ ಎನ್ನಲಾಗಿದೆ.
ಬಳಿಕ ಆ ವೀಡಿಯೋಗಳು ಯಶೋಧರ ಯಾನೆ ಯಶು ಮತ್ತು ಹಿಂದೂ ಧರ್ಮ 006 ಎಂಬ ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್ ಮತ್ತು ಇನ್ ಸ್ಟಾ ಗ್ರಾಂ ಖಾತೆಯಲ್ಲಿ ವೈರಲ್ ಮಾಡಲಾಗಿದ್ದು ಈ ಘಟನೆಗೆ ಸಂಬಂಧಿಸಿದಂತೆ ಯುವತಿಯ ಸಹೋದರ ನೀಡಿದ ದೂರಿನಂತೆ ಕಾಪು ಠಾಣೆಯಲ್ಲಿ 8-10 ಮಂದಿ ಸಂಘಟನೆಯ ಯುವಕರ ಮೇಲೆ ಪ್ರಕರಣ ದಾಖಲಾಗಿದೆ.
ಆರೋಪಿಗಳ ವಿರುದ್ದ ಅಕ್ರಮಕೂಟ, ಗಲಭೆಗೆ ಯತ್ನ, ಅನಪೇಕ್ಷಿತ ನಿರ್ಬಂಧದಂತಹ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಲಾಗಿದ್ದು ಕಾನೂನಿನಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಡಾ,.ಅರುಣ್ ಕುಮಾರ್ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…