Featured

ಕಾಪು: ಅನೈತಿಕ ಪೊಲೀಸ್ ಗಿರಿ – ಹಿಂದು ಸಂಘಟನೆಯ ಕಾರ್ಯಕರ್ತರ ವಿರುದ್ದ ಪ್ರಕರಣ ದಾಖಲು – vishwanews24

ಕಾಪು: ಅನೈತಿಕ ಪೊಲೀಸ್ ಗಿರಿ – ಹಿಂದು ಸಂಘಟನೆಯ ಕಾರ್ಯಕರ್ತರ ವಿರುದ್ದ ಪ್ರಕರಣ ದಾಖಲು

ಉಡುಪಿ: ಭಿನ್ನ ಕೋಮಿಗೆ ಸೇರಿದ ಯುವಕ ಮತ್ತು ಯುವತಿ ಬೈಕಿನಲ್ಲಿ ತೆರಳುತ್ತಿದ್ದಾಗ ಕೆಲವು ಯುವಕರು ತಡೆದು ನಿಲ್ಲಿಸಿ ಬೆದರಿಸಿದ ಘಟನೆಯ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ತಿಂಗಳ 22 ರಂದು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಸಿರಿಮನೆ ಫಾಲ್ಸ್ ಗೆ ತೆರಳಿದ್ದ ಕಾಪು ಮೂಲದ ಯುವಕ ಮತ್ತು ಯುವತಿ ಹಿಂದಕ್ಕೆ ಬರುವಾಗ ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದು ನಿಲ್ಲಿಸಿ ವಿಚಾರಣೆ ನಡೆಸಿದ್ದರು. ಈ ಸಂದರ್ಭದಲ್ಲಿ ಯುವತಿ ತಮ್ಮನ್ನು ಬಿಟ್ಟುಬಿಡುವಂತೆ, ತಮ್ಮ ವಿಡಿಯೋ ಮಾಡದಂತೆ ಯುವಕರಲ್ಲಿ ವಿನಂತಿ ಮಾಡಿದ್ದರೂ ಬಿಡದೆ ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. ಬಳಿಕ ಯುವಕ ಮತ್ತು ಯವತಿಯ ಕುಟುಂಬದ ಸದಸ್ಯರ ಸಮ್ಮುಖ ಮಾತುಕತೆ ನಡೆದು ಎರಡು ಕುಟುಂಬದವರು ಪರಿಚಯಸ್ಥರಾಗಿರುವ ಕಾರಣ ನಮಗೆ ಯಾವುದೇ ರೀತಿಯ ಅನುಮಾನ ಯುವಕನ ಮೇಲೆ ಇಲ್ಲ ಎಂದು ಪ್ರಕರಣ ದಾಖಲಿಸಿದೆ ವಾಪಾಸಾಗಿದ್ದರು.

ಘಟನೆಯ ವೇಳೆ ಸಂಘಟನೆಯ ಯುವಕರು ವೀಡಿಯೋ ಮಾಡಿಕೊಂಡಿದ್ದು ಅದನ್ನು ಪೊಲೀಸರು ಆ ವೇಳೆ ಡಿಲಿಟ್ ಮಾಡಿರಲಿಲ್ಲ ಎನ್ನಲಾಗಿದೆ.

ಬಳಿಕ ಆ ವೀಡಿಯೋಗಳು ಯಶೋಧರ ಯಾನೆ ಯಶು ಮತ್ತು ಹಿಂದೂ ಧರ್ಮ 006 ಎಂಬ ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್ ಮತ್ತು ಇನ್ ಸ್ಟಾ ಗ್ರಾಂ ಖಾತೆಯಲ್ಲಿ ವೈರಲ್ ಮಾಡಲಾಗಿದ್ದು ಈ ಘಟನೆಗೆ ಸಂಬಂಧಿಸಿದಂತೆ ಯುವತಿಯ ಸಹೋದರ ನೀಡಿದ ದೂರಿನಂತೆ ಕಾಪು ಠಾಣೆಯಲ್ಲಿ 8-10 ಮಂದಿ ಸಂಘಟನೆಯ ಯುವಕರ ಮೇಲೆ ಪ್ರಕರಣ ದಾಖಲಾಗಿದೆ.

ಆರೋಪಿಗಳ ವಿರುದ್ದ ಅಕ್ರಮಕೂಟ, ಗಲಭೆಗೆ ಯತ್ನ, ಅನಪೇಕ್ಷಿತ ನಿರ್ಬಂಧದಂತಹ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಲಾಗಿದ್ದು ಕಾನೂನಿನಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಡಾ,.ಅರುಣ್ ಕುಮಾರ್ ತಿಳಿಸಿದ್ದಾರೆ.

 

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

19 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

19 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

19 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

20 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago