ಕಾಪು: ಮನೆ ಮನೆಯಿಂದ ಅನ್ನಭಾಗ್ಯದ ಅಕ್ಕಿಯನ್ನು ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತಿದ್ದ ಕಾಪು ಪೊಲೀಸರು ಹಾಗೂ ಆಹಾರ ನಿರೀಕ್ಷಕರ ತಂಡ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ.
ಮೂಡು ಗೋಪಾಡಿ ಬಿಜಾಡಿಯ ಇಮ್ತಿಯಾಜ್ ಅಹಮ್ಮದ್, ಕುಂದಾಪುರದ ಮಾವಿನ ಕಟ್ಟೆ ಕುರ್ಕುಂಜೆ ನಿವಾಸಿ ಮಹಮ್ಮದ್ ನಾಸೀರ್, ಕೋಟೇಶ್ವರದ ಹಳೆ ಅಳಿವೆ ನಿವಾಸಿ ಮಹಮ್ಮದ್ ತಯೂಬ್ ಎಂದು ಪೊಲೀಸರು ತಿಳಿಸಿರುತ್ತಾರೆ.
ಆಹಾರ ನಿರೀಕ್ಷಕ. ಟಿ. ಲೀಲಾನಂದ ದೂರಿನ ಮೇರೆಗೆ ಭಾನುವಾರ ಕೋಟೆ ಗ್ರಾಮದ ಸುಮಿತ್ರಾ ಜನರಲ್ ಸ್ಟೋರ್ ಸಮೀಪ ಕಾರ್ಯಾಚರಣೆ ನಡೆಸುತಿದ್ದಾಗ ಕಾರನ್ನು ತಡೆದು ನಿಲ್ಲಿಸಿದಾಗ ಅದರಲ್ಲಿದ್ದ ಚಾಲಕನು, ಚಾಲಕನ ಪಕ್ಕದ ಸೀಟಿನಲ್ಲಿ ಮತ್ತು ಚಾಲಕನ ಹಿಂಬದಿ ಸೀಟಿನಲ್ಲಿ ಕುಳಿತಿದ್ದವನು, ಓಡಲು ಯತ್ನಿಸಿದ್ದರು.
ಪೊಲೀಸರು ಅವರನ್ನು ಹಿಡಿದು ಕಾರನ್ನು ಪರಿಶೀಲಿಸಿದಾಗ ಚಾಲಕನ ಸೀಟಿನ ಹಿಂಬದಿಯಲ್ಲಿ ಪ್ಲಾಸ್ಟಿಕ್ ಚೀಲಗಳು ಕಂಡುಬಂತು. ಇದರಲ್ಲಿ ಅಕ್ಕಿ ತುಂಬಿದ 16 ಚೀಲಗಳಿದ್ದು, ಪ್ರತಿಯೊಂದು ಚೀಲವು 35 ಕೆ.ಜಿ . ತೂಕವಿದ್ದು ಒಟ್ಟು 560 ಕೆ.ಜಿ. ಕಂಡುಬಂತು. ಆರೋಪಿಗಳು ಮನೆ ಮನೆಗೆ ಹೋಗಿ ಸರಕಾರದಿಂದ ಉಚಿತವಾಗಿ ದೊರೆಯುವ ಅಕ್ಕಿಯನ್ನು ಖರೀದಿಸಿ ಹೆಚ್ಚು ಬೆಲೆಗೆ ಮಾರಾಟ ಮಾಡಲು ಕೊಂಡೊಯ್ಯುತ್ತಿರುವುದಾಗಿ ತಿಳಿಸಿರುತ್ತಾರೆ .
ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರಕ್ಕೆ ಆಕ್ಷೇಪ: ತುರ್ತು ಪರಿಶೀಲನೆಗಾಗಿ ಕೇಂದ್ರ ಗೃಹ ಸಚಿವರಿಗೆ ಶೋಭಾ ಕರಂದ್ಲಾಜೆ ಪತ್ರ ಬೆಂಗಳೂರು: ಕರ್ನಾಟಕ…
ಬೆಂಗಳೂರು: ಫುಟ್ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು…
ಅಣಬೆ ಬೆಳೆದಿದ್ದ ಹೊಲಕ್ಕೆ ಅದರ ಮಾಲೀಕರಿಂದ ಕ್ರಿಮಿನಾಶಕ ಔಷಧಿ ಸಿಂಪಡಿಕೆ.. ಕೀಟನಾಶಕದ ಅಂಶ ಅಣಬೆಯೊಳಗೆ ಸೇರಿ ವಿಷವಾಗಿ ಮಾರ್ಪಟ್ಟು ಇಡೀ…
ಉಡುಪಿ: ವಂಚನೆ ಹಾಗೂ ಬ್ಲ್ಯಾಕ್ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು ಉಡುಪಿ:ಬಹುಕೋಟಿ ವಂಚನೆ…
ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…
ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ ಡಿ.ಕೆ. ಶಿ ಬೆಳಗಾವಿ: ಮುಜರಾಯಿ…