ಕಾಪು: ಮನೆ ಮನೆಯಿಂದ ಅನ್ನಭಾಗ್ಯದ ಅಕ್ಕಿಯನ್ನು ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತಿದ್ದ ಕಾಪು ಪೊಲೀಸರು ಹಾಗೂ ಆಹಾರ ನಿರೀಕ್ಷಕರ ತಂಡ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ.
ಮೂಡು ಗೋಪಾಡಿ ಬಿಜಾಡಿಯ ಇಮ್ತಿಯಾಜ್ ಅಹಮ್ಮದ್, ಕುಂದಾಪುರದ ಮಾವಿನ ಕಟ್ಟೆ ಕುರ್ಕುಂಜೆ ನಿವಾಸಿ ಮಹಮ್ಮದ್ ನಾಸೀರ್, ಕೋಟೇಶ್ವರದ ಹಳೆ ಅಳಿವೆ ನಿವಾಸಿ ಮಹಮ್ಮದ್ ತಯೂಬ್ ಎಂದು ಪೊಲೀಸರು ತಿಳಿಸಿರುತ್ತಾರೆ.
ಆಹಾರ ನಿರೀಕ್ಷಕ. ಟಿ. ಲೀಲಾನಂದ ದೂರಿನ ಮೇರೆಗೆ ಭಾನುವಾರ ಕೋಟೆ ಗ್ರಾಮದ ಸುಮಿತ್ರಾ ಜನರಲ್ ಸ್ಟೋರ್ ಸಮೀಪ ಕಾರ್ಯಾಚರಣೆ ನಡೆಸುತಿದ್ದಾಗ ಕಾರನ್ನು ತಡೆದು ನಿಲ್ಲಿಸಿದಾಗ ಅದರಲ್ಲಿದ್ದ ಚಾಲಕನು, ಚಾಲಕನ ಪಕ್ಕದ ಸೀಟಿನಲ್ಲಿ ಮತ್ತು ಚಾಲಕನ ಹಿಂಬದಿ ಸೀಟಿನಲ್ಲಿ ಕುಳಿತಿದ್ದವನು, ಓಡಲು ಯತ್ನಿಸಿದ್ದರು.
ಪೊಲೀಸರು ಅವರನ್ನು ಹಿಡಿದು ಕಾರನ್ನು ಪರಿಶೀಲಿಸಿದಾಗ ಚಾಲಕನ ಸೀಟಿನ ಹಿಂಬದಿಯಲ್ಲಿ ಪ್ಲಾಸ್ಟಿಕ್ ಚೀಲಗಳು ಕಂಡುಬಂತು. ಇದರಲ್ಲಿ ಅಕ್ಕಿ ತುಂಬಿದ 16 ಚೀಲಗಳಿದ್ದು, ಪ್ರತಿಯೊಂದು ಚೀಲವು 35 ಕೆ.ಜಿ . ತೂಕವಿದ್ದು ಒಟ್ಟು 560 ಕೆ.ಜಿ. ಕಂಡುಬಂತು. ಆರೋಪಿಗಳು ಮನೆ ಮನೆಗೆ ಹೋಗಿ ಸರಕಾರದಿಂದ ಉಚಿತವಾಗಿ ದೊರೆಯುವ ಅಕ್ಕಿಯನ್ನು ಖರೀದಿಸಿ ಹೆಚ್ಚು ಬೆಲೆಗೆ ಮಾರಾಟ ಮಾಡಲು ಕೊಂಡೊಯ್ಯುತ್ತಿರುವುದಾಗಿ ತಿಳಿಸಿರುತ್ತಾರೆ .
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…