ಕಾಪು: ಬೈಕ್ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ದಿನಸಿ ಸೇಲ್ಸ್ ಮೆನ್ ವೃತ್ತಿ ಮಾಡುತ್ತಿದ್ದ ವ್ಯಕ್ತಿಯಲ್ಲಿದ್ದ ಲಕ್ಷಾಂತರ ರೂ. ನಗದನ್ನು ದೋಚಿ ಪರಾರಿಯಾದ ಘಟನೆ ಕಾಪು ಫ್ಲೈ ಓವರ್ ಅಡಿಯಲ್ಲಿ ನಡೆದಿದೆ.
ಉಡುಪಿಯ ಉಮೇಶ್ ಪರ್ಸ್ ಮತ್ತು ಲಕ್ಷಾಂತರ ರೂ. ಕಳೆದುಕೊಂಡಿರುವ ವ್ಯಕ್ತಿ.ಉಮೇಶ್ ಅವರು ನಿಟ್ಟೂರಿನ ಟ್ರೇಡರ್ಸ್ವೊಂದರಲ್ಲಿ ಸೇಲ್ಸ್ಮೆನ್ ಆಗಿ ಕೆಲಸ ಮಾಡಿಕೊಂಡಿದ್ದು ವಾಹನದಲ್ಲಿ ಸಾಮಾಗ್ರಿಗಳನ್ನು ನಿಟ್ಟೂರಿನಿಂದ ಬೈಕಂಪಾಡಿವರೆಗೆ ಅಂಗಡಿಗಳಿಗೆ ಸರಬರಾಜು ಮಾಡುತ್ತಿದ್ದರು. ಬೆಳಗ್ಗೆ ಸಾಮಗ್ರಿಗಳನ್ನು ತುಂಬಿಸಿಕೊಂಡು ವಿವಿಧ ಕಡೆಗಳಲ್ಲಿ ಲೈನ್ ಸೇಲ್ ಮಾಡಿ ಹಣ ಸಂಗ್ರಹಿಸಿಕೊಂಡು ಮರಳಿ ನಿಟ್ಟೂರಿನ ಕಡೆ ಹೋಗುತ್ತಿರುವಾಗ ಕಾಪು ಹೊಸ ಮಾರಿಗುಡಿ ಮುಂಭಾಗದ ಅಂಡರ್ಪಾಸ್ನಲ್ಲಿ ಈ ಘಟನೆ ಸಂಭವಿಸಿದೆ.
ಕಾಪುವಿನ ಜನರಲ್ ಸ್ಟೋರ್ನ ಮಾಲಕರೊಬ್ಬರು ಕರೆ ಮಾಡಿ ಗೋಧಿ ಕಡಿ ಬೇಕು ಎಂದು ತಿಳಿಸಿದ್ದು, ಅದರಂತೆ ರಾತ್ರಿ 8.45ಕ್ಕೆ ಅಂಗಡಿಗೆ ನೀಡಿ ಹಣವನ್ನು ಪಡೆದು ಅಂಡರ್ಪಾಸ್ ಕೆಳಕಡೆ ತಲುಪುವಾಗ ಅಪರಿಚಿತ ಬೈಕ್ ಸವಾರನೋರ್ವ ಉಮೇಶ್ ಬಳಿ ಬೈಕನ್ನು ನಿಲ್ಲಿಸಿ ಅವರಲ್ಲಿದ್ದ ಬ್ಯಾಗನ್ನು ಕಸಿದು ಪರಾರಿಯಾಗಿದ್ದಾನೆ.
ಬ್ಯಾಗಿನಲ್ಲಿ ಲಕ್ಷಾಂತರ ರೂ. ಇತ್ತು ಎಂದು ಉಮೇಶ್ ನೀಡಿದ ದೂರಿನಂತೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…