ಕಾಪು: ಬೈಕ್ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ದಿನಸಿ ಸೇಲ್ಸ್ ಮೆನ್ ವೃತ್ತಿ ಮಾಡುತ್ತಿದ್ದ ವ್ಯಕ್ತಿಯಲ್ಲಿದ್ದ ಲಕ್ಷಾಂತರ ರೂ. ನಗದನ್ನು ದೋಚಿ ಪರಾರಿಯಾದ ಘಟನೆ ಕಾಪು ಫ್ಲೈ ಓವರ್ ಅಡಿಯಲ್ಲಿ ನಡೆದಿದೆ.
ಉಡುಪಿಯ ಉಮೇಶ್ ಪರ್ಸ್ ಮತ್ತು ಲಕ್ಷಾಂತರ ರೂ. ಕಳೆದುಕೊಂಡಿರುವ ವ್ಯಕ್ತಿ.ಉಮೇಶ್ ಅವರು ನಿಟ್ಟೂರಿನ ಟ್ರೇಡರ್ಸ್ವೊಂದರಲ್ಲಿ ಸೇಲ್ಸ್ಮೆನ್ ಆಗಿ ಕೆಲಸ ಮಾಡಿಕೊಂಡಿದ್ದು ವಾಹನದಲ್ಲಿ ಸಾಮಾಗ್ರಿಗಳನ್ನು ನಿಟ್ಟೂರಿನಿಂದ ಬೈಕಂಪಾಡಿವರೆಗೆ ಅಂಗಡಿಗಳಿಗೆ ಸರಬರಾಜು ಮಾಡುತ್ತಿದ್ದರು. ಬೆಳಗ್ಗೆ ಸಾಮಗ್ರಿಗಳನ್ನು ತುಂಬಿಸಿಕೊಂಡು ವಿವಿಧ ಕಡೆಗಳಲ್ಲಿ ಲೈನ್ ಸೇಲ್ ಮಾಡಿ ಹಣ ಸಂಗ್ರಹಿಸಿಕೊಂಡು ಮರಳಿ ನಿಟ್ಟೂರಿನ ಕಡೆ ಹೋಗುತ್ತಿರುವಾಗ ಕಾಪು ಹೊಸ ಮಾರಿಗುಡಿ ಮುಂಭಾಗದ ಅಂಡರ್ಪಾಸ್ನಲ್ಲಿ ಈ ಘಟನೆ ಸಂಭವಿಸಿದೆ.
ಕಾಪುವಿನ ಜನರಲ್ ಸ್ಟೋರ್ನ ಮಾಲಕರೊಬ್ಬರು ಕರೆ ಮಾಡಿ ಗೋಧಿ ಕಡಿ ಬೇಕು ಎಂದು ತಿಳಿಸಿದ್ದು, ಅದರಂತೆ ರಾತ್ರಿ 8.45ಕ್ಕೆ ಅಂಗಡಿಗೆ ನೀಡಿ ಹಣವನ್ನು ಪಡೆದು ಅಂಡರ್ಪಾಸ್ ಕೆಳಕಡೆ ತಲುಪುವಾಗ ಅಪರಿಚಿತ ಬೈಕ್ ಸವಾರನೋರ್ವ ಉಮೇಶ್ ಬಳಿ ಬೈಕನ್ನು ನಿಲ್ಲಿಸಿ ಅವರಲ್ಲಿದ್ದ ಬ್ಯಾಗನ್ನು ಕಸಿದು ಪರಾರಿಯಾಗಿದ್ದಾನೆ.
ಬ್ಯಾಗಿನಲ್ಲಿ ಲಕ್ಷಾಂತರ ರೂ. ಇತ್ತು ಎಂದು ಉಮೇಶ್ ನೀಡಿದ ದೂರಿನಂತೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…