ಕಾಪು: ಬೈಕ್ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ದಿನಸಿ ಸೇಲ್ಸ್ ಮೆನ್ ವೃತ್ತಿ ಮಾಡುತ್ತಿದ್ದ ವ್ಯಕ್ತಿಯಲ್ಲಿದ್ದ ಲಕ್ಷಾಂತರ ರೂ. ನಗದನ್ನು ದೋಚಿ ಪರಾರಿಯಾದ ಘಟನೆ ಕಾಪು ಫ್ಲೈ ಓವರ್ ಅಡಿಯಲ್ಲಿ ನಡೆದಿದೆ.
ಉಡುಪಿಯ ಉಮೇಶ್ ಪರ್ಸ್ ಮತ್ತು ಲಕ್ಷಾಂತರ ರೂ. ಕಳೆದುಕೊಂಡಿರುವ ವ್ಯಕ್ತಿ.ಉಮೇಶ್ ಅವರು ನಿಟ್ಟೂರಿನ ಟ್ರೇಡರ್ಸ್ವೊಂದರಲ್ಲಿ ಸೇಲ್ಸ್ಮೆನ್ ಆಗಿ ಕೆಲಸ ಮಾಡಿಕೊಂಡಿದ್ದು ವಾಹನದಲ್ಲಿ ಸಾಮಾಗ್ರಿಗಳನ್ನು ನಿಟ್ಟೂರಿನಿಂದ ಬೈಕಂಪಾಡಿವರೆಗೆ ಅಂಗಡಿಗಳಿಗೆ ಸರಬರಾಜು ಮಾಡುತ್ತಿದ್ದರು. ಬೆಳಗ್ಗೆ ಸಾಮಗ್ರಿಗಳನ್ನು ತುಂಬಿಸಿಕೊಂಡು ವಿವಿಧ ಕಡೆಗಳಲ್ಲಿ ಲೈನ್ ಸೇಲ್ ಮಾಡಿ ಹಣ ಸಂಗ್ರಹಿಸಿಕೊಂಡು ಮರಳಿ ನಿಟ್ಟೂರಿನ ಕಡೆ ಹೋಗುತ್ತಿರುವಾಗ ಕಾಪು ಹೊಸ ಮಾರಿಗುಡಿ ಮುಂಭಾಗದ ಅಂಡರ್ಪಾಸ್ನಲ್ಲಿ ಈ ಘಟನೆ ಸಂಭವಿಸಿದೆ.
ಕಾಪುವಿನ ಜನರಲ್ ಸ್ಟೋರ್ನ ಮಾಲಕರೊಬ್ಬರು ಕರೆ ಮಾಡಿ ಗೋಧಿ ಕಡಿ ಬೇಕು ಎಂದು ತಿಳಿಸಿದ್ದು, ಅದರಂತೆ ರಾತ್ರಿ 8.45ಕ್ಕೆ ಅಂಗಡಿಗೆ ನೀಡಿ ಹಣವನ್ನು ಪಡೆದು ಅಂಡರ್ಪಾಸ್ ಕೆಳಕಡೆ ತಲುಪುವಾಗ ಅಪರಿಚಿತ ಬೈಕ್ ಸವಾರನೋರ್ವ ಉಮೇಶ್ ಬಳಿ ಬೈಕನ್ನು ನಿಲ್ಲಿಸಿ ಅವರಲ್ಲಿದ್ದ ಬ್ಯಾಗನ್ನು ಕಸಿದು ಪರಾರಿಯಾಗಿದ್ದಾನೆ.
ಬ್ಯಾಗಿನಲ್ಲಿ ಲಕ್ಷಾಂತರ ರೂ. ಇತ್ತು ಎಂದು ಉಮೇಶ್ ನೀಡಿದ ದೂರಿನಂತೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…