ಕಾಪು: ಉತ್ತರ ಪ್ರದೇಶ ಮೂಲದ ಕಾರ್ಮಿಕನೋರ್ವ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ, ಅತ್ಯಾಚಾರ ಎಸಗಿ ಆ ಬಳಿಕ ಪರಾರಿಯಾಗಿರುವ ಘಟನೆ ಕಾಪುವಿನಲ್ಲಿ ನಡೆದಿದೆ.ಕಾಪುವಿನ ಸೆಲೂನ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಶಾರುಖ್ ಖಾನ್ ಆರೋಪಿತ.
ಆರೋಪಿ ಪತ್ನಿಯ ಜತೆಗೆ ಕಾಪುವಿನ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ. ಈ ನಡುವೆ ಆರೋಪಿ ಶಾರೂಖ್, ತನಗೆ ಮತ್ತು ಪತ್ನಿಗೆ ಆಶ್ರಯ ನೀಡಿದ್ದ ಮಹಿಳೆಯ ಅಪ್ರಾಪ್ತ ವಯಸ್ಸಿನ ಮಗಳನ್ನು ಪುಸಲಾಯಿಸಿ ದೈಹಿಕ ಸಂಬಂಧ ಬೆಳೆಸಿದ್ದನು. ಈ ಬಗ್ಗೆ ಬಾಲಕಿಯೂ ಬಾಯಿ ಬಿಟ್ಟಿರಲಿಲ್ಲ. ಈ ನಡುವೆ ಬಾಲಕಿಯಲ್ಲಾದ ದೈಹಿಕ ಬದಲಾವಣೆಯನ್ನು ಕಂಡು ಆಕೆಯ ತಾಯಿ ವೈದ್ಯರಲ್ಲಿ ಪರೀಕ್ಷೆಗೆ ಕರೆದೊಯ್ದಾಗ ಅಲ್ಲಿ ಬಾಲಕಿ ಗರ್ಭೀಣಿಯಾಗಿರುವ ಮಾಹಿತಿ ದೊರಕಿದೆ.
ಪ್ರಕರಣ ಬೆಳಕಿಗೆ ಬರುತ್ತಲೇ ಮನೆಯವರು ಆರೋಪಿಗಾಗಿ ಹುಡುಕಾಟ ನಡೆಸಿದ್ದು ಆತ ತನ್ನ ಊರಿಗೆ ಮರಳಿ ಹೋಗಿರುವ ವಿಚಾರ ಬೆಳಕಿಗೆ ಬಂದಿದ್ದು ಮನೆಯವರು ಕಾಪು ಪೊಲೀಸರಿಗೆ ದೂರು ನೀಡಿದ್ದಾರೆ.
ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ಕಾಪು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…
‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್ವುಡ್ನ ರಾಕಿಂಗ್ ಸ್ಟಾರ್…