Featured

ಕಾಪು: ಅಷ್ಟಮಿ ವೇಷದಿಂದ ಸಂಗ್ರಹಿಸಿದ 8 ಲಕ್ಷ ರೂ. 5 ಬಡ ಮಕ್ಕಳ ವೈದ್ಯಕೀಯ ಚಿಕಿತ್ಸೆಗೆ ವಿತರಿಸಿದ ರವಿ ಕಟಪಾಡಿ – Vishwanews24

ಕಾಪು: ಅಷ್ಟಮಿ ವೇಷದಿಂದ ಸಂಗ್ರಹಿಸಿದ 8 ಲಕ್ಷ ರೂ. 5 ಬಡ ಮಕ್ಕಳ ವೈದ್ಯಕೀಯ ಚಿಕಿತ್ಸೆಗೆ ವಿತರಿಸಿದ ರವಿ ಕಟಪಾಡಿ

ಕಾಪು: ಅನಾರೋಗ್ಯದಿಂದ ಇರುವ ಬಡ ಅಶಕ್ತ ಮಕ್ಕಳ ವೈದ್ಯಕೀಯ ವೆಚ್ಚ ಭರಿಸಲು ಅಷ್ಟಮಿ ಈ ಬಾರಿ ರವಿ ಕಟಪಾಡಿ ಸೀ ಫೋಕ್ ಎಂಬ ಆಂಗ್ಲ ಚಲನಚಿತ್ರದ ವೇಷವನ್ನು ಧರಿಸಿ ಹಣ ಸಂಗ್ರಹಿಸಿದ್ದರು. ಸಮಾಜ ಸೇವಕ ರವಿ ಕಟಪಾಡಿ ತಂಡವು ಕಟಪಾಡಿಯ ಶ್ರೀ ಕ್ಷೇತ್ರ ಪೇಟೆಬೆಟ್ಟು ಭಗವಾನ್ ಶ್ರೀ ಬಬ್ಬುಸ್ವಾಮಿ, ಶ್ರೀ ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ 5 ಬಡ ಅಶಕ್ತ ಮಕ್ಕಳ ವೈದ್ಯಕೀಯ ಚಿಕಿತ್ಸೆಗೆ ಈ ಬಾರಿ 8,22,212 ರೂ. ಸಂಗ್ರಹಿಸಿದ ಮೊತ್ತವನ್ನು ವಿತರಣೆ ಮಾಡಿದ್ದಾರೆ.

ರವಿ ಕಟಪಾಡಿ ಈ ಸಂದರ್ಭ ಮಾತನಾಡಿ, ತಂಡವು ಡಬ್ಬಿಯನ್ನು ಹಿಡಿಯದೆ ಜನರ ಪ್ರೀತಿ, ವಿಶ್ವಾಸ, ನಂಬಿಕೆಯ ಮೇಲೆಗೆ ಸಂಗ್ರಹವಾಗಿರುವ ಹಣವನ್ನು ಈ ಬಾರಿ ಅನಾರೋಗ್ಯದಿಂದಿರುವ ಕಾರ್ಕಳ ಕಣಜಾರು ನಿಶ್ಮಿತಾ ಕೆ. ಅವರಿಗೆ 3ಲಕ್ಷ ರೂ., ಕುಂದಾಪುರ ಕಟ್ ಬೇಲ್ತೂರು ನಾಗೇಂದ್ರಗೆ 2 ಲಕ್ಷ 50ಸಾವಿರ, ಮಾರಣಕಟ್ಟೆ ಇಡೂರು ಸುಶಾಂತ್ ಶೆಟ್ಟಿಗೆ ಮತ್ತು ಋತಿಕ್ ಮೂಡಬಿದ್ರಿಗೆ ತಲಾ 1 ಲಕ್ಷ ರೂ., ಸಸಿಹಿತ್ಲುವಿನ ಪೂರ್ವಿಗೆ 50 ಸಾವಿರ ನೀಡಲಾಗಿದೆ. ಆ ಮೂಲಕ 9 ವರ್ಷಗಳಿಂದ ಅಷ್ಟಮಿಯಂದು ವೇಷ ಧರಿಸಿ ಸಂಗ್ರಹಿಸಲಾದ ಒಟ್ಟು 1ಕೋಟಿ 22ಲಕ್ಷ ರೂವನ್ನು 118ಬಡ ಅಶಕ್ತ ಮಕ್ಕಳ ವೈದ್ಯಕೀಯ ಚಿಕಿತ್ಸೆಗೆ ನೀಡಿದಂತಾಗಿದೆ ಎಂದರು.

ಶ್ರೀ ಕ್ಷೇತ್ರ ಪೇಟೆಬೆಟ್ಟು ಗುರಿಕಾರರಾದ ಹರಿಶ್ಚಂದ್ರ ಪಿಲಾರು ಮತ್ತು ತುಕಾರಾಮ ಎಸ್. ಉರ್ವ ಶುಭವನ್ನು ಹಾರೈಸಿದರು.

ಈ ಸಂಧರ್ಭ ಮಹೇಶ್ ಶೆಣೈ, ಅರ್ಚಕರಾದ ಜಯಕರ ವಿ., ಪ್ರಮುಖರಾದ ಯಶವಂತ್, ಶಂಕರ್ ಕಟಪಾಡಿ, ರಾಜ್‌ಗೋಪಾಲ್, ಲಕ್ಷ್ಮಣ್, ಉಮೇಶ್ ಹಾಗೂ ರವಿ ಫ್ರೆಂಡ್ಸ್ ಕಟಪಾಡಿ‌ ತಂದ ಸದಸ್ಯರು ಉಪಸ್ಥಿತರಿದ್ದರು.

Vishwa News 24

Recent Posts

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…

39 minutes ago

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…

1 hour ago

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ – ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ – vishwanews24

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…

1 hour ago

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

2 hours ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

3 hours ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

23 hours ago