Featured

ಕಾಪು: ಅಷ್ಟಮಿ ವೇಷದಿಂದ ಸಂಗ್ರಹಿಸಿದ 8 ಲಕ್ಷ ರೂ. 5 ಬಡ ಮಕ್ಕಳ ವೈದ್ಯಕೀಯ ಚಿಕಿತ್ಸೆಗೆ ವಿತರಿಸಿದ ರವಿ ಕಟಪಾಡಿ – Vishwanews24

ಕಾಪು: ಅಷ್ಟಮಿ ವೇಷದಿಂದ ಸಂಗ್ರಹಿಸಿದ 8 ಲಕ್ಷ ರೂ. 5 ಬಡ ಮಕ್ಕಳ ವೈದ್ಯಕೀಯ ಚಿಕಿತ್ಸೆಗೆ ವಿತರಿಸಿದ ರವಿ ಕಟಪಾಡಿ

ಕಾಪು: ಅನಾರೋಗ್ಯದಿಂದ ಇರುವ ಬಡ ಅಶಕ್ತ ಮಕ್ಕಳ ವೈದ್ಯಕೀಯ ವೆಚ್ಚ ಭರಿಸಲು ಅಷ್ಟಮಿ ಈ ಬಾರಿ ರವಿ ಕಟಪಾಡಿ ಸೀ ಫೋಕ್ ಎಂಬ ಆಂಗ್ಲ ಚಲನಚಿತ್ರದ ವೇಷವನ್ನು ಧರಿಸಿ ಹಣ ಸಂಗ್ರಹಿಸಿದ್ದರು. ಸಮಾಜ ಸೇವಕ ರವಿ ಕಟಪಾಡಿ ತಂಡವು ಕಟಪಾಡಿಯ ಶ್ರೀ ಕ್ಷೇತ್ರ ಪೇಟೆಬೆಟ್ಟು ಭಗವಾನ್ ಶ್ರೀ ಬಬ್ಬುಸ್ವಾಮಿ, ಶ್ರೀ ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ 5 ಬಡ ಅಶಕ್ತ ಮಕ್ಕಳ ವೈದ್ಯಕೀಯ ಚಿಕಿತ್ಸೆಗೆ ಈ ಬಾರಿ 8,22,212 ರೂ. ಸಂಗ್ರಹಿಸಿದ ಮೊತ್ತವನ್ನು ವಿತರಣೆ ಮಾಡಿದ್ದಾರೆ.

ರವಿ ಕಟಪಾಡಿ ಈ ಸಂದರ್ಭ ಮಾತನಾಡಿ, ತಂಡವು ಡಬ್ಬಿಯನ್ನು ಹಿಡಿಯದೆ ಜನರ ಪ್ರೀತಿ, ವಿಶ್ವಾಸ, ನಂಬಿಕೆಯ ಮೇಲೆಗೆ ಸಂಗ್ರಹವಾಗಿರುವ ಹಣವನ್ನು ಈ ಬಾರಿ ಅನಾರೋಗ್ಯದಿಂದಿರುವ ಕಾರ್ಕಳ ಕಣಜಾರು ನಿಶ್ಮಿತಾ ಕೆ. ಅವರಿಗೆ 3ಲಕ್ಷ ರೂ., ಕುಂದಾಪುರ ಕಟ್ ಬೇಲ್ತೂರು ನಾಗೇಂದ್ರಗೆ 2 ಲಕ್ಷ 50ಸಾವಿರ, ಮಾರಣಕಟ್ಟೆ ಇಡೂರು ಸುಶಾಂತ್ ಶೆಟ್ಟಿಗೆ ಮತ್ತು ಋತಿಕ್ ಮೂಡಬಿದ್ರಿಗೆ ತಲಾ 1 ಲಕ್ಷ ರೂ., ಸಸಿಹಿತ್ಲುವಿನ ಪೂರ್ವಿಗೆ 50 ಸಾವಿರ ನೀಡಲಾಗಿದೆ. ಆ ಮೂಲಕ 9 ವರ್ಷಗಳಿಂದ ಅಷ್ಟಮಿಯಂದು ವೇಷ ಧರಿಸಿ ಸಂಗ್ರಹಿಸಲಾದ ಒಟ್ಟು 1ಕೋಟಿ 22ಲಕ್ಷ ರೂವನ್ನು 118ಬಡ ಅಶಕ್ತ ಮಕ್ಕಳ ವೈದ್ಯಕೀಯ ಚಿಕಿತ್ಸೆಗೆ ನೀಡಿದಂತಾಗಿದೆ ಎಂದರು.

ಶ್ರೀ ಕ್ಷೇತ್ರ ಪೇಟೆಬೆಟ್ಟು ಗುರಿಕಾರರಾದ ಹರಿಶ್ಚಂದ್ರ ಪಿಲಾರು ಮತ್ತು ತುಕಾರಾಮ ಎಸ್. ಉರ್ವ ಶುಭವನ್ನು ಹಾರೈಸಿದರು.

ಈ ಸಂಧರ್ಭ ಮಹೇಶ್ ಶೆಣೈ, ಅರ್ಚಕರಾದ ಜಯಕರ ವಿ., ಪ್ರಮುಖರಾದ ಯಶವಂತ್, ಶಂಕರ್ ಕಟಪಾಡಿ, ರಾಜ್‌ಗೋಪಾಲ್, ಲಕ್ಷ್ಮಣ್, ಉಮೇಶ್ ಹಾಗೂ ರವಿ ಫ್ರೆಂಡ್ಸ್ ಕಟಪಾಡಿ‌ ತಂದ ಸದಸ್ಯರು ಉಪಸ್ಥಿತರಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

9 minutes ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

15 minutes ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago