ಕಾಪು: ಅನಾರೋಗ್ಯದಿಂದ ಇರುವ ಬಡ ಅಶಕ್ತ ಮಕ್ಕಳ ವೈದ್ಯಕೀಯ ವೆಚ್ಚ ಭರಿಸಲು ಅಷ್ಟಮಿ ಈ ಬಾರಿ ರವಿ ಕಟಪಾಡಿ ಸೀ ಫೋಕ್ ಎಂಬ ಆಂಗ್ಲ ಚಲನಚಿತ್ರದ ವೇಷವನ್ನು ಧರಿಸಿ ಹಣ ಸಂಗ್ರಹಿಸಿದ್ದರು. ಸಮಾಜ ಸೇವಕ ರವಿ ಕಟಪಾಡಿ ತಂಡವು ಕಟಪಾಡಿಯ ಶ್ರೀ ಕ್ಷೇತ್ರ ಪೇಟೆಬೆಟ್ಟು ಭಗವಾನ್ ಶ್ರೀ ಬಬ್ಬುಸ್ವಾಮಿ, ಶ್ರೀ ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ 5 ಬಡ ಅಶಕ್ತ ಮಕ್ಕಳ ವೈದ್ಯಕೀಯ ಚಿಕಿತ್ಸೆಗೆ ಈ ಬಾರಿ 8,22,212 ರೂ. ಸಂಗ್ರಹಿಸಿದ ಮೊತ್ತವನ್ನು ವಿತರಣೆ ಮಾಡಿದ್ದಾರೆ.
ರವಿ ಕಟಪಾಡಿ ಈ ಸಂದರ್ಭ ಮಾತನಾಡಿ, ತಂಡವು ಡಬ್ಬಿಯನ್ನು ಹಿಡಿಯದೆ ಜನರ ಪ್ರೀತಿ, ವಿಶ್ವಾಸ, ನಂಬಿಕೆಯ ಮೇಲೆಗೆ ಸಂಗ್ರಹವಾಗಿರುವ ಹಣವನ್ನು ಈ ಬಾರಿ ಅನಾರೋಗ್ಯದಿಂದಿರುವ ಕಾರ್ಕಳ ಕಣಜಾರು ನಿಶ್ಮಿತಾ ಕೆ. ಅವರಿಗೆ 3ಲಕ್ಷ ರೂ., ಕುಂದಾಪುರ ಕಟ್ ಬೇಲ್ತೂರು ನಾಗೇಂದ್ರಗೆ 2 ಲಕ್ಷ 50ಸಾವಿರ, ಮಾರಣಕಟ್ಟೆ ಇಡೂರು ಸುಶಾಂತ್ ಶೆಟ್ಟಿಗೆ ಮತ್ತು ಋತಿಕ್ ಮೂಡಬಿದ್ರಿಗೆ ತಲಾ 1 ಲಕ್ಷ ರೂ., ಸಸಿಹಿತ್ಲುವಿನ ಪೂರ್ವಿಗೆ 50 ಸಾವಿರ ನೀಡಲಾಗಿದೆ. ಆ ಮೂಲಕ 9 ವರ್ಷಗಳಿಂದ ಅಷ್ಟಮಿಯಂದು ವೇಷ ಧರಿಸಿ ಸಂಗ್ರಹಿಸಲಾದ ಒಟ್ಟು 1ಕೋಟಿ 22ಲಕ್ಷ ರೂವನ್ನು 118ಬಡ ಅಶಕ್ತ ಮಕ್ಕಳ ವೈದ್ಯಕೀಯ ಚಿಕಿತ್ಸೆಗೆ ನೀಡಿದಂತಾಗಿದೆ ಎಂದರು.
ಶ್ರೀ ಕ್ಷೇತ್ರ ಪೇಟೆಬೆಟ್ಟು ಗುರಿಕಾರರಾದ ಹರಿಶ್ಚಂದ್ರ ಪಿಲಾರು ಮತ್ತು ತುಕಾರಾಮ ಎಸ್. ಉರ್ವ ಶುಭವನ್ನು ಹಾರೈಸಿದರು.
ಈ ಸಂಧರ್ಭ ಮಹೇಶ್ ಶೆಣೈ, ಅರ್ಚಕರಾದ ಜಯಕರ ವಿ., ಪ್ರಮುಖರಾದ ಯಶವಂತ್, ಶಂಕರ್ ಕಟಪಾಡಿ, ರಾಜ್ಗೋಪಾಲ್, ಲಕ್ಷ್ಮಣ್, ಉಮೇಶ್ ಹಾಗೂ ರವಿ ಫ್ರೆಂಡ್ಸ್ ಕಟಪಾಡಿ ತಂದ ಸದಸ್ಯರು ಉಪಸ್ಥಿತರಿದ್ದರು.
ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್ಪಿಜಿ ಪೂರೈಕೆ…
ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್ಪಿಜಿ ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…
ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…