Featured

ಕಾಪು: ಅಷ್ಟಮಿ ವೇಷದಿಂದ ಸಂಗ್ರಹಿಸಿದ 8 ಲಕ್ಷ ರೂ. 5 ಬಡ ಮಕ್ಕಳ ವೈದ್ಯಕೀಯ ಚಿಕಿತ್ಸೆಗೆ ವಿತರಿಸಿದ ರವಿ ಕಟಪಾಡಿ – Vishwanews24

ಕಾಪು: ಅಷ್ಟಮಿ ವೇಷದಿಂದ ಸಂಗ್ರಹಿಸಿದ 8 ಲಕ್ಷ ರೂ. 5 ಬಡ ಮಕ್ಕಳ ವೈದ್ಯಕೀಯ ಚಿಕಿತ್ಸೆಗೆ ವಿತರಿಸಿದ ರವಿ ಕಟಪಾಡಿ

ಕಾಪು: ಅನಾರೋಗ್ಯದಿಂದ ಇರುವ ಬಡ ಅಶಕ್ತ ಮಕ್ಕಳ ವೈದ್ಯಕೀಯ ವೆಚ್ಚ ಭರಿಸಲು ಅಷ್ಟಮಿ ಈ ಬಾರಿ ರವಿ ಕಟಪಾಡಿ ಸೀ ಫೋಕ್ ಎಂಬ ಆಂಗ್ಲ ಚಲನಚಿತ್ರದ ವೇಷವನ್ನು ಧರಿಸಿ ಹಣ ಸಂಗ್ರಹಿಸಿದ್ದರು. ಸಮಾಜ ಸೇವಕ ರವಿ ಕಟಪಾಡಿ ತಂಡವು ಕಟಪಾಡಿಯ ಶ್ರೀ ಕ್ಷೇತ್ರ ಪೇಟೆಬೆಟ್ಟು ಭಗವಾನ್ ಶ್ರೀ ಬಬ್ಬುಸ್ವಾಮಿ, ಶ್ರೀ ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ 5 ಬಡ ಅಶಕ್ತ ಮಕ್ಕಳ ವೈದ್ಯಕೀಯ ಚಿಕಿತ್ಸೆಗೆ ಈ ಬಾರಿ 8,22,212 ರೂ. ಸಂಗ್ರಹಿಸಿದ ಮೊತ್ತವನ್ನು ವಿತರಣೆ ಮಾಡಿದ್ದಾರೆ.

ರವಿ ಕಟಪಾಡಿ ಈ ಸಂದರ್ಭ ಮಾತನಾಡಿ, ತಂಡವು ಡಬ್ಬಿಯನ್ನು ಹಿಡಿಯದೆ ಜನರ ಪ್ರೀತಿ, ವಿಶ್ವಾಸ, ನಂಬಿಕೆಯ ಮೇಲೆಗೆ ಸಂಗ್ರಹವಾಗಿರುವ ಹಣವನ್ನು ಈ ಬಾರಿ ಅನಾರೋಗ್ಯದಿಂದಿರುವ ಕಾರ್ಕಳ ಕಣಜಾರು ನಿಶ್ಮಿತಾ ಕೆ. ಅವರಿಗೆ 3ಲಕ್ಷ ರೂ., ಕುಂದಾಪುರ ಕಟ್ ಬೇಲ್ತೂರು ನಾಗೇಂದ್ರಗೆ 2 ಲಕ್ಷ 50ಸಾವಿರ, ಮಾರಣಕಟ್ಟೆ ಇಡೂರು ಸುಶಾಂತ್ ಶೆಟ್ಟಿಗೆ ಮತ್ತು ಋತಿಕ್ ಮೂಡಬಿದ್ರಿಗೆ ತಲಾ 1 ಲಕ್ಷ ರೂ., ಸಸಿಹಿತ್ಲುವಿನ ಪೂರ್ವಿಗೆ 50 ಸಾವಿರ ನೀಡಲಾಗಿದೆ. ಆ ಮೂಲಕ 9 ವರ್ಷಗಳಿಂದ ಅಷ್ಟಮಿಯಂದು ವೇಷ ಧರಿಸಿ ಸಂಗ್ರಹಿಸಲಾದ ಒಟ್ಟು 1ಕೋಟಿ 22ಲಕ್ಷ ರೂವನ್ನು 118ಬಡ ಅಶಕ್ತ ಮಕ್ಕಳ ವೈದ್ಯಕೀಯ ಚಿಕಿತ್ಸೆಗೆ ನೀಡಿದಂತಾಗಿದೆ ಎಂದರು.

ಶ್ರೀ ಕ್ಷೇತ್ರ ಪೇಟೆಬೆಟ್ಟು ಗುರಿಕಾರರಾದ ಹರಿಶ್ಚಂದ್ರ ಪಿಲಾರು ಮತ್ತು ತುಕಾರಾಮ ಎಸ್. ಉರ್ವ ಶುಭವನ್ನು ಹಾರೈಸಿದರು.

ಈ ಸಂಧರ್ಭ ಮಹೇಶ್ ಶೆಣೈ, ಅರ್ಚಕರಾದ ಜಯಕರ ವಿ., ಪ್ರಮುಖರಾದ ಯಶವಂತ್, ಶಂಕರ್ ಕಟಪಾಡಿ, ರಾಜ್‌ಗೋಪಾಲ್, ಲಕ್ಷ್ಮಣ್, ಉಮೇಶ್ ಹಾಗೂ ರವಿ ಫ್ರೆಂಡ್ಸ್ ಕಟಪಾಡಿ‌ ತಂದ ಸದಸ್ಯರು ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ – vishwanews24

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ  - ಫಲ್ಗುಣಿ ನದಿಯಲ್ಲಿ ಶೋಧ…

3 minutes ago

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ – vishwanews24

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…

18 minutes ago

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…

41 minutes ago

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ – vishwanews24

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…

48 minutes ago

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…

2 hours ago

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…

2 hours ago