ಕಾಪು: ಕಾಪು ಸೀಮೆಯ ಆರಾಧ್ಯ ದೇವತೆ ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದ ಸುತ್ತುಪೌಳಿಯ ಜೀರ್ಣೋದ್ಧಾರದ ಪ್ರಯುಕ್ತ ಅ. 15ರಂದು ಜೀರ್ಣೋದ್ಧಾರ ನಿಧಿ ಸ್ಥಾಪನೆ – ಮುಷ್ಟಿ ಕಾಣಿಕೆ ಸಮರ್ಪಣೆ – ಮಹಾಸಂಕಲ್ಪ ಅಭಿಯಾನ ಪ್ರಾರಂಭಗೊಳ್ಳಲಿದೆ.
ದೇವಸ್ಥಾನದ ಎಂಟು ದಶಕಗಳ ಹಳೆಯ ವಾಸ್ತುವಿನ ಸುತ್ತುಪೌಳಿ ಪ್ರಸ್ತುತ ಜೀರ್ಣಾವಸ್ಥೆಯಲ್ಲಿದ್ದು ಶ್ರೀ ಸಂಸ್ಥಾನ ಕಾಶೀ ಮಠಾಧಿಪತಿ ಶ್ರೀಮತ್ ಸಂಯಮೀಂದ್ರತೀರ್ಥ ಶ್ರೀಪಾದರ ಆಶೀರ್ವಾದ ಮತ್ತು ಮಾರ್ಗದರ್ಶನದಂತೆ ಸುತ್ತುಪೌಳಿಯ ಸಮಗ್ರ ಜೀರ್ಣೋದ್ಧಾರಕ್ಕೆ ಯೋಜನೆ ಹಾಕಿಕೊಳ್ಳಲಾಗಿದೆ.
ಕಾಪು ಶ್ರೀ ವೆಂಕಟರಮಣ ದೇವಸ್ಥಾನ ಮತ್ತು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಕಾಪು ಪೇಟೆಯ ಹತ್ತು ಸಮಸ್ತರು ನವರಾತ್ರಿಯ ಮೊದಲ ದಿನ ಬೆಳಗ್ಗೆ ಒಡೆಯ ವೆಂಕಟರಮಣ ದೇವರಿಗೆ ಪ್ರಾರ್ಥನೆ ಸಲ್ಲಿಸಿ, ಬಳಿಕ ಬೆಳಗ್ಗೆ 9 ಗಂಟೆಗೆ ಮಾರಿಯಮ್ಮ ದೇವಸ್ಥಾನದಲ್ಲಿ ಜೀರ್ಣೋದ್ಧಾರ ನಿಧಿ ಸ್ಥಾಪನೆ, ಮುಷ್ಟಿ ಕಾಣಿಕೆ ಸಮರ್ಪಣೆ, ಮಹಾ ಸಂಕಲ್ಪಕ್ಕೆ ಚಾಲನೆ ನೀಡಲಿದ್ದಾರೆ.
ಅ. 17ರ ವರೆಗೆ ಮುಷ್ಟಿ ಕಾಣಿಕೆ ಸಮರ್ಪಣೆ ನಡೆಯಲಿದೆ ಎಂದು ಆಡಳಿತ ಮೊಕ್ತೇಸರ ಪ್ರಸಾದ್ ಗೋಕುಲ್ದಾಸ್ ಶೆಣೈ ಮತ್ತು ಆಡಳಿತ ಮಂಡಳಿಯ ಪ್ರಕಟನೆ ತಿಳಿಸಿದೆ.
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…
ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ…
ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು ಜೈಪುರ: ಸ್ಕಾರ್ಪಿಯೋ ಎಸ್ಯುವಿ ಕಾರೊಂದು ಸುಮಾರು 700 ಅಡಿ ಕಂದಕಕ್ಕೆ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ ಕೊಲ್ಲೂರು: ಮೇ 17ರ…
ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…