ಕಾಪು : ಎರಡು ವರ್ಷಕ್ಕೊಮ್ಮೆ ಮಹತ್ವಪೂರ್ಣವಾಗಿ ನಡೆಯುವ ಕಾಪುವಿನ ಪಿಲಿಕೋಲಕ್ಕೆ ಇಂದು ಕಾಪುವಿನ ಹಳೆ ಮಾರಿಯಮ್ಮ ದೇವಸ್ಥಾನದ ಸಮೀಪದ ಬ್ರಹ್ಮ ಮುಗ್ಗೇರ್ಕಳ ಹುಲಿಚಂಡಿ ದೈವಸ್ಥಾನದಲ್ಲಿ ಚಾಲನೆ ನೀಡಲಾಯಿತು. ಹತ್ತಿರದ ಕೆರೆಯಲ್ಲಿ ಪಿಲಿದೈವ ನರ್ತಕ ಸ್ನಾನಾದಿ ಕಾರ್ಯ ಮುಗಿಸಿ ಬಳಿಕ ದೈವಸ್ಥಾನದ ಮುಂಭಾಗದಲ್ಲಿ ತೆಂಗಿನ ಗರಿಗಳಿಂದ ತಯಾರಿಸಲಾದ ಸಿರಿಯಿಂದ ಮಾಡಿದ ಗುಂಡದೊಳಗೆ ಹುಲಿವೇಷದ ಬಣ್ಣಗಾರಿಕೆ ನಡೆಯುತ್ತದೆ.
ಈ ವೇಳೆ ಗುಂಡದೊಳಗೆ ಹಾಗೂ ಸುತ್ತಮುತ್ತ ಯಾರೂ ಪ್ರವೇಶ ಮಾಡುವಂತಿಲ್ಲ. ಹುಲಿವೇಷದ ಬಣ್ಣಗಾರಿಕೆಯೊಂದಿಗೆ ವಿಚಿತ್ರವಾಗಿ ಹುಲಿಯಂತೆ ಆರ್ಭಟಿಸುತ್ತ ಒಲಿಗುಂಡದಿಂದ ವೇಷಧಾರಿ ವೈಭವದಿಂದ ಹೊರಬರುವ ಮೂಲಕ ಪಿಲಿಕೋಲಕ್ಕೆ ಚಾಲನೆ ದೊರೆಯುತ್ತದೆ. ಹುಲಿ ಬೇಟೆಯ ಜೊತೆಗೆ ಗ್ರಾಮ ಸಂಚಾರಕ್ಕೆ ಹೊರಟು ಹಳೆ ಮಾರಿಗುಡಿ ಮುಂಭಾಗದ ಬಾಳೆಯ ಗರುಡ- ಗಂಬವನ್ನು ಮುರಿಯುವ ಹುಲಿ ವೇಷಧಾರಿ, ಜೀವಂತ ಕೋಳಿಯ ರಕ್ತ ಹೀರುವ ಸನ್ನಿವೇಶ ಮೈ ಜುಮ್ಮೆನಿಸುತ್ತದೆ. ಈ ಸಮಯದಲ್ಲಿ ಹುಲಿಯ ಅರ್ಭಟ, ಹಾರಾಟ ಮೈನವಿರೇಳಿಸುತ್ತದೆ.
ಕಾರಣಿಕ ಹಾಗೂ ದೈವಿಕ ಹಿನ್ನೆಲೆ ಹೊಂದಿರುವ ಪಿಲಿಭೂತ ಕೋಲದಲ್ಲಿ ಹುಲಿ ಮುಟ್ಟಿದರೆ ಮರಣ ಭೀತಿಯ ನಂಬಿಕೆ ಇರುವುದರಿಂದ ಪಿಲಿಕೋಲವನ್ನು ಸಾಕಷ್ಟು ದೂರದಲ್ಲಿ ನಿಂತು ಜನರು ವೀಕ್ಷಿಸುತ್ತಾರೆ. ಕಾಪು ಬ್ರಹ್ಮ ಮುಗ್ಗೇರ್ಕಳ ಹುಲಿಚಂಡಿ ದೈವಸ್ಥಾನದಲ್ಲಿ ಈ ಅವಧಿಯಲ್ಲಿ ಪಿಲಿಕೋಲ ಮಾತ್ರವಲ್ಲದೆ ಮುಗ್ಗೇರ್ಕಳ, ತನ್ನಿಮಾನಿಗ, ಬಬ್ಬರ್ಯ, ಗುಳಿಗ ಹಾಗೂ ಪರಿವಾರ ದೈವಗಳ ನೇಮೋತ್ಸವವೂ ನಡೆಯುತ್ತದೆ. ಆದರೆ, ಕೊನೆಯಲ್ಲಿ ನಡೆಯುವ ಪಿಲಿಕೋಲವನ್ನು ನೋಡಲು ಜನಸಾಗರವೇ ಹರಿದು ಬರುವುದು ವಿಶೇಷ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…