ಕಾಪು: ತುಳುನಾಡಿನ ಪ್ರಸಿದ್ಧ ಏಳು ಜಾತ್ರೆಗಳಲ್ಲಿ ಒಂದಾಗಿರುವ ಕಾಪು ವಿನ ಸುಗ್ಗಿ ಮಾರಿಪೂಜೆಗೆ ಮಂಗಳವಾರ ಸಂಜೆ ವೈಭವದ ಚಾಲನೆ ದೊರಕಿದ್ದು, ಬುಧವಾರ ಸಂಜೆಯವರೆಗೆ ಮುಂದು ವರಿಯಲಿದೆ.
ಮಾರಿಪೂಜೆಗೆ ಪೂರ್ವಭಾವಿಯಾಗಿ ಮಂಗಳವಾರ ರಾತ್ರಿ ಕಾಪು ಹಳೇ ಮಾರಿ ಗುಡಿಗೆ ಶ್ರೀ ವೆಂಕಟರಮಣ ದೇವಸ್ಥಾನ, ಕಾಪು ಹೊಸ ಮಾರಿಗುಡಿ ಮತ್ತು ಕಾಪು ಮೂರನೇ (ಕಲ್ಯ) ಮಾರಿಗುಡಿಗೆ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಿಂದ ಮಾರಿಯಮ್ಮ ದೇವಿಯ ಸಾಂಕೇತಿಕ ಮೂರ್ತಿ ಮತ್ತು ಆಭರಣ ಸಹಿತವಾದ ಬಿಂಬವನ್ನು ಮೆರವಣಿಗೆಯ ಮೂಲಕ ತರಲಾಯಿತು. ಆಬಳಿಕ ಮಾರಿಯಮ್ಮ ದೇವಿಯ ಸಾಂಕೇತಿಕ ಮೂರ್ತಿ ಮತ್ತು ಹೊಂಗಾರಕನ ಮರದಲ್ಲಿ ಕೆತ್ತಿದ ಮೂರ್ತಿಯನ್ನು ಗದ್ದುಗೆಯಲ್ಲಿ ಪ್ರತಿಷ್ಠಾಪಿಸಿ, ಮಾರಿಪೂಜೆಯ ವಿವಿಧ ಪೂಜಾ ವಿಧಿ ವಿಧಾನಗಳನ್ನು ನೆರವೇ ರಿಸಿ ಸುಗ್ಗಿ ಮಾರಿಪೂಜೆಗೆ ಚಾಲನೆ ನೀಡಲಾಯಿತು.
ಗದ್ದಿಗೆ ಪೂಜೆ ವಿಶೇಷ
ಗದ್ದುಗೆಯೇ ಪ್ರಧಾನವಾಗಿರುವ ಕಾಪುವಿನ ಮಾರಿಯಮ್ಮನ ಸನ್ನಿಧಿಯಲ್ಲಿ ಗದ್ದಿಗೆಪೂಜೆ ವಿಶೇಷ ಸೇವೆಯಾಗಿದೆ. ಕಾಲಾವಧಿ ಸುಗ್ಗಿ ಮಾರಿಪೂಜೆ ಸಂದರ್ಭ ಭಕ್ತಾಧಿಗಳಿಂದ 50 ಸಾವಿರಕ್ಕೂ ಅಧಿಕ ಗದ್ದಿಗೆಪೂಜೆ ಹಾಗೂ ಹೂವಿನ ಪೂಜೆ, ಕುಂಕುಮಾರ್ಚನೆ ಸೇವೆ ಹಾಗೂ ರಕ್ತಾಹಾರ ರೂಪದಲ್ಲಿ ನೂರಾರು ಕುರಿ, ಆಡು, ಲಕ್ಷಾಂತರ ಸಂಖ್ಯೆಯ ಕೋಳಿಗಳನ್ನು ಸಮರ್ಪಿಸಲ್ಪಡುತ್ತದೆ.
ಸುಗ್ಗಿ ಮಾರಿಪೂಜೆಯ ಪ್ರಯುಕ್ತ ಮೂರು ಮಾರಿಗುಡಿಗಳನ್ನೂ ವಿಶೇಷ ವಿದ್ಯುತ್ ದೀಪಾಲಂಕಾರ ಮತ್ತು ಪುಷ್ಪಾ ಲಂಕಾರದೊಂದಿಗೆ ಅಲಂಕಾರ ಗೊಳಿಸಲಾಗಿದೆ. ಕಾಪು ಮಾರಿಯಮ್ಮ ದೇವಿಯ ಸನ್ನಿಧಾನದಲ್ಲಿ ಸುಗ್ಗಿ ಮಾರಿಪೂಜೆ ಅತ್ಯಂತ ವಿಶೇಷವಾಗಿ ಆಚರಿಸಲಾಗುತ್ತಿದ್ದು ಲಕ್ಷಾಂತರ ಮಂದಿ ದೇವಿಯ ದರ್ಶನ ಪಡೆದರು.
ಗಮನ ಸೆಳೆದ ರಜತ ರಥ
ಕಾಪು ಪೇಟೆ ಗೌಡ ಸಾರಸ್ವತ ಸಮಾಜಕ್ಕೆ ಒಳಪಟ್ಟಿರುವ ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ದೇವಿಯ ಭಕ್ತವೃಂದದ ತನು, ಮನ, ಧನದ ಸಹಕಾರದಿಂದ 1 ಕೋ. ರೂ. ರೂ. ವೆಚ್ಚದ ರಜತ ರಥ ನಿರ್ಮಾಣಗೊಂಡಿದ್ದು, ವೆಂಕಟರಮಣ ದೇವಸ್ಥಾನದಿಂದ ಮಾರಿಗುಡಿಗೆ ದೇವಿಯ ಬಿಂಬವನ್ನು ಕುಳ್ಳಿರಿಸಿಕೊಂಡು ಬಂದು ರಥವನ್ನು ಸಮರ್ಪಿಸಿದ್ದು ಈ ಬಾರಿಯ ವಿಶೇಷತೆಯಾಗಿತ್ತು.
ಬಿಗು ಪೊಲೀಸ್ ಬಂದೋಬಸ್ತ್
ಮೂರು ಮಾರಿಗುಡಿಗಳ ಪರಿಸರ ದಲ್ಲೂ ಕಾಪು ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ವ್ಯವಸ್ಥೆಗೊಳಿಸಲಾಗಿದೆ. ಹಿರಿಯ ಅಧಿಕಾರಿಗಳ ಸಹಿತವಾಗಿ ಸುಮಾರು 100ಕ್ಕೂ ಅಧಿಕ ಮಂದಿ ಪೊಲೀಸರನ್ನು ಬಂದೋಬಸ್ತ್ಗಾಗಿ ನಿಯೋಜಿಸಲಾಗಿದ್ದು, ಆಯ್ದ ಕಡೆ 18 ಸಿಸಿಟಿವಿ ಕಣ್ಗಾವಲು ಅಳವಡಿಸಲಾಗಿದೆ.
ಬುಧವಾರ ಸಂಜೆ ತೆರೆ
ಬುಧವಾರ ಮಧ್ಯಾಹ್ನದವರೆಗೂ ದೇವಿಯ ವೀಕ್ಷಣೆಗೆ ಅವಕಾಶವಿದೆ. ಮಧ್ಯಾಹ್ನ ಪೂಜೆ ಬಳಿಕ ಮತ್ತೆ ನಡೆ ಯುವ ದರ್ಶನ ಸೇವೆಯಲ್ಲಿ ಭಕ್ತರ ಸಂಕಷ್ಟಕ್ಕೆ ಪರಿಹಾರ, ಅಭಯ ಪ್ರಸಾದ ನೀಡಲಾಗುತ್ತದೆ. ನಂತರ ದೇವಿಯ ಮೂರ್ತಿಯನ್ನು ಮೆರವಣಿಗೆ ಯಲ್ಲಿ ಕರೆದೊಯ್ದು, ಮಲ್ಲಾರಿನಲ್ಲಿರುವ ನಿರ್ದಿಷ್ಟ ಸ್ಥಳದಲ್ಲಿ ವಿಸರ್ಜಿಸುವುದ ರೊಂದಿಗೆ ಮಾರಿಪೂಜಾ ಪೂಜಾ ವಿಧಿಗಳಿಗೆ ತೆರೆ ಎಳೆಯಲಾಗುತ್ತದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…