Featured

ಕಾಪು‌ :ಇನ್ನಂಜೆ ರೋಟರಿ ಸಮುದಾಯ ದಳ- ದಾನಿಗಳ ನೆರವಿನ “ಶ್ರೀ ಭ್ರಾಮರಿ” ಗೃಹ ಹಸ್ತಾಂತರ – Vishwanews24

ಕಾಪು‌ :ಇನ್ನಂಜೆ ರೋಟರಿ ಸಮುದಾಯ ದಳ, ದಾನಿಗಳ ನೆರವಿನ “ಶ್ರೀ ಭ್ರಾಮರಿ” ಗೃಹ ಹಸ್ತಾಂತರ

ಕಾಪು‌ : ನಮ್ಮ ದೇಶದಲ್ಲಿ ಬಡ ಜನರಿದ್ದಾರೆ. ಅದೇ ರೀತಿ ಶ್ರೀಮಂತರೂ ಇದ್ದಾರೆ. ಬಡಜನರ ಆಲೋಚನಾ ಕ್ರಮದಂತೆ ಶ್ರೀಮಂತರ ಆಲೋಚನೆ ಮಾಡಿದರೆ ದೇಶದ ಬಡತನ ನಿರ್ಮೂಲನವಾಗಲು ಸಾಧ್ಯ. ಇನ್ನಂಜೆ ರೋಟರಿಯ ಕಾರ್ಯ ಶ್ಲಾಘನೀಯ. ಈ ಕಾರ್ಯಕ್ಕೆ ಕೈಜೋಡಿಸಿದ ದಾನಿಗಳಿಗೂ ಅಭಿನಂದನೆಗಳು ಎಂದು ಮಹಾಲಕ್ಷ್ಮೀ ಕೋ. ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷ ಯಶ್‌ಪಾಲ್ ಸುವರ್ಣ ಹೇಳಿದರು.

ಅವರು ಇನ್ನಂಜೆ ರೋಟರಿ ಸಮುದಾಯ ದಳದ ನೇತೃತ್ವದಲ್ಲಿ ಸಂಘ ಸಂಸ್ಥೆಗಳು ಮತ್ತು ದಾನಿಗಳ ಸಹಕಾರದೊಂದಿಗೆ ಸುಮಾರು ೯ ಲಕ್ಷ ರೂಪಾಯಿ ವೆಚ್ಚದಲ್ಲಿ ಇನ್ನಂಜೆ ಕಲ್ಯಾಲುವಿನಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಭ್ರಾಮರಿ ನಿಲಯವನ್ನು ಉದ್ಘಾಟಿಸಿ ಮಾತನಾಡಿದರು.

 

ಈ ಸಂದರ್ಭದಲ್ಲಿ ರೋಟರಿ ಸಮುದಾಯದಳದ ಗೌರವ ಸಲಹೆಗಾರ ನವೀನ್ ಅಮೀನ್ ಶಂಕರಪುರ,ಉದ್ಯಮಿ ಶ್ರೀಶ ನಾಯಕ್ ಪೆರ್ಣಂಕಿಲ, ಸಾಮಾಜಿಕ ಕಾರ್ಯಕರ್ತ ಶಶಿಧರ್ ಆಚಾರ್ಯ, ಶಂಕರಪುರ ಜೇಸಿಐ ಅಧ್ಯಕ್ಷ ಜಗದೀಶ್ ಅಮೀನ್, ರೋಟರಿ ಕ್ಲಬ್ ಅಧ್ಯಕ್ಷ ಗ್ಲಾಡ್ಸನ್ ಕುಂದರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೀಜನೆಯ ಮೇಲ್ವಿಚಾರಕಿ ಮಮತಾ, ಇನ್ನಂಜೆ ಸಿ.ಎ ಬ್ಯಾಂಕ್ ಉಪಾಧ್ಯಕ್ಷ ಚಂದ್ರಹಾಸ ಶೆಟ್ಟಿ, ಇನ್ನಂಜೆ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯ ನಿರ್ವಹಣಾಽಕಾರಿ ಸುಬ್ರಹ್ಮಣ್ಯ ಭಟ್, ಇನ್ನಂಜೆ ಬಿಲ್ಲವ ಸಂಘದ ಅಧ್ಯಕ್ಷ ಸದಾಶಿವ ಪೂಜಾರಿ, ಕೃಷ್ಣ ಅಮೀನ್, ಯುವಕ ಮಂಡಲದ ಅಧ್ಯಕ್ಷ ಉಮೇಶ್ ಆಚಾರ್ಯ, ಗ್ರಾ.ಪಂ. ಸದಸ್ಯರಾದ ದಿವೇಶ್ ಶೆಟ್ಟಿ, ಸುರೇಖಾ ಶೆಟ್ಟಿ, ಸವಿತಾ ಶೆಟ್ಟಿ,ವೈ ಎಸ್ ಎಮ್ ಫ್ರೆಂಡ್ಸ್, ಮಡುಂಬು ತಂಡದ ಅಧ್ಯಕ್ಷ ಸುನಿಲ್ ಸಾಲ್ಯಾನ್, ಇಂಜಿನಿಯರ್ ಸುಧಾಕರ್ ಅಂಚನ್, ವಿಕ್ಟರ್ ಮಾರ್ಟಿಸ್, ಚಂದ್ರ ಪೂಜಾರಿ, ಫ್ಲಾವಿಯಾ ಮಿನೇಜಸ್, ಲಕ್ಷ್ಮಣ್ ಪೂಜಾರಿ, ಸಿಲ್ವಿಯಾ ಕೆಸ್ತಲಿನೋ, ಅನಿಲ್ಡಾ ನೊರೋನ್ಹ, ಸಂತೋಷ್ ಕುಮಾರ್, ಪ್ರಶಾಂತ್ ಶೆಟ್ಟಿ ಕಲ್ಲಟ್ಟೆ ಮೊದಲಾದವರು ಉಪಸ್ಥಿತರಿದ್ದರು.

ಇನ್ನಂಜೆ ರೋಟರಿ ಸಮುದಾಯ ದಳದ ಸಭಾಪತಿ ಮಾಲಿನಿ ಶೆಟ್ಟಿ ಪ್ರಸ್ತಾವನೆಗೈದರು. ಸಮುದಾಯ ದಳದ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಮನೋಹರ್ ಕಲ್ಲುಗುಡ್ಡೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Vishwa News 24

Recent Posts

ಮೇ 1 ರಿಂದ ಶಿವಮೊಗ್ಗ – ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ – vishwanews24

ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…

9 minutes ago

ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತ್ಯು – vishwanews24

ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…

29 minutes ago

ಉಡುಪಿ: ಬ್ಯಾಡ್ಮಿಂಟನ್‌ ತಾರೆ ಆಯುಷ್ ಶೆಟ್ಟಿಗೆ ಮುಖ್ಯಮಂತ್ರಿಯಿಂದ ಗೌರವಾರ್ಪಣೆ – vishwanews24

ಉಡುಪಿ: ಬ್ಯಾಡ್ಮಿಂಟನ್‌ ತಾರೆ ಕಾರ್ಕಳದ ಆಯುಷ್ ಶೆಟ್ಟಿಗೆ ಮುಖ್ಯಮಂತ್ರಿಯಿಂದ ಗೌರವಾರ್ಪಣೆ ಉಡುಪಿ: ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ…

35 minutes ago

ಎಸ್‌ ಎಸ್‌ ಎಲ್‌ ಸಿ ಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ : ಹೈಕೋರ್ಟ್ – vishwanews24

ಎಸ್‌ಎಸ್‌ ಎಲ್‌ಸಿ ಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ : ಹೈಕೋರ್ಟ್ ಬೆಂಗಳೂರು : ಪ್ರಸಕ್ತ ಸಾಲಿನಿಂದಲೇ…

2 hours ago

ನಮ್ಮ ತಂದೆ ಸಿಎಂ ಆಗಿರುವವರೆಗೂ ನಾನು ಸಚಿವ ಸ್ಥಾನ ಕೇಳುವುದಿಲ್ಲ : ಯತೀಂದ್ರ ಸಿದ್ದರಾಮಯ್ಯ – vishwanews24

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ,  ನಮ್ಮ ತಂದೆಯೇ 5 ವರ್ಷ ಸಿಎಂ : ಮತ್ತೊಮ್ಮೆ ತಂದೆಯ ಪರ ಯತೀಂದ್ರ …

2 hours ago

ಉಡುಪಿ : ದ್ವಿತೀಯ ಪಿ.ಯು.ಸಿ ಪರೀಕ್ಷೆ -2 : ನೋಂದಣಿಗೆ ಅವಕಾಶ – vishwanews24

ಉಡುಪಿ : ದ್ವಿತೀಯಪಿ.ಯು.ಸಿಪರೀಕ್ಷೆ -2 : ಏ. 17 ರ ವರೆಗೆ ನೋಂದಣಿಗೆಅವಕಾಶ   ಉಡುಪಿ : 2026 ನೇ ಸಾಲಿನ…

2 hours ago