ಉಚ್ಚಿಲ : ಇತ್ತೀಚೆಗೆ ನವಿಕೃತಗೊಂಡ ಉಡುಪಿ ಕಾಪುವಿನ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರರವರು ಬುಧವಾರ ಸಂಜೆ ಭೇಟಿ ನೀಡಿ ಶ್ರೀ ಮಹಾಲಕ್ಷ್ಮಿಯ ದರ್ಶನ ಪಡೆದರು.
ದೇವಳದ ವತಿಯಿಂದ ಅವರನ್ನು ಪೂರ್ಣ ಕುಂಭದೊಂದಿಗೆ ಸ್ವಾಗತಿಸಲಾಯಿತು. ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಮುಖ್ಯ ಅರ್ಚಕ ಕೆ ವಿ ರಾಘವೇಂದ್ರ ಉಪಾಧ್ಯಾಯ ಹಾಗೂ ವಿಷ್ಣುಮೂರ್ತಿ ಉಪಾಧ್ಯಾಯರವರು ಶ್ರೀದೇವಿಗೆ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು.
ಕಾಪು : ಬೈಕ್ ಡಿಕ್ಕಿ – ಪಾದಚಾರಿ ಸಾವು – Vishwanews24
ದೇವಾಲಯದ ರುವಾರಿ ನಾಡೋಜ ಡಾ. ಜಿ. ಶಂಕರ್ ರವರು ದೇವಳದ ವತಿಯಿಂದ ಗೃಹ ಸಚಿವರನ್ನು ಸನ್ಮಾನಿಸಿ ಸ್ಮರಣಿಕೆ ನೀಡಿದರು. ಈ ಸಂದರ್ಭ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ, ಕ್ಷೇತ್ರ ಆಡಳಿತ ಸಮಿತಿಯ ಅಧ್ಯಕ್ಷ ವಾಸುದೇವ ಸಾಲಿಯನ್, ಮಹಾಜನ ಸಂಘದ ಮಹಿಳಾ ಘಟಕದ ಉಪಾಧ್ಯಕ್ಷೆ ಜಾನಕಿ ಲೀಲಾಧರ್, ನಾರಾಯಣ ಕರ್ಕೇರಾ, ದಿನೇಶ್ ಏರ್ಮಾಳು, ದಿನೇಶ್ ಮೂಳೂರು, ಮೋಹನ್ ಬಂಗೇರ, ದೇವಳದ ಪ್ರಧಾನ ಕಾರ್ಯನಿರ್ವಾಹಕ ಸತೀಶ್ ಅಮೀನ್ ಮಟ್ಟು, ಕಾಪು ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಕಾಪು ಪೊಲೀಸ್ ವೃತ್ತ ನಿರೀಕ್ಷಕ ಕೆ. ಸಿ ಪೂವಯ್ಯ, ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ್ ಮತ್ತಿತರರು ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…