Featured

ಕಾಪು: ಉದ್ಯಾವರದಲ್ಲಿ ಎಟಿಎಂ ದರೋಡೆಗೆ ಯತ್ನಿಸಿದ ಪ್ರಕರಣ : ಇಬ್ಬರು ಯುವಕರ ಬಂಧನ – vishwanews24

ಕಾಪು: ಉದ್ಯಾವರದಲ್ಲಿ ಎಟಿಎಂ ದರೋಡೆಗೆ ಯತ್ನಿಸಿದ ಪ್ರಕರಣ : ಇಬ್ಬರು ಯುವಕರ ಬಂಧನ

ಕಾಪು :ಫೆ.12ರಂದು ಉದ್ಯಾವರದಲ್ಲಿ ಎಟಿಎಂ ದರೋಡೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಪು ಪೊಲೀಸರು ಇಬ್ಬರು ಯುವಕರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಮಂಗಳೂರಿನ ಮಂಜನಾಡಿಯ ಅಸೈಗೋಳಿ ನಿವಾಸಿ ಅಬೂಬಕ್ಕರ್ ಸಿದ್ದೀಕ್ (24) ಮತ್ತು ಮಂಗಳೂರಿನ ಕಣ್ಣೂರಿನ ಮೊಹಮ್ಮದ್ ಯಾಸೀನ್ (21) ಎಂದು ಗುರುತಿಸಲಾಗಿದೆ.

ಫೆಬ್ರವರಿ 12 ರಂದು ಮುಂಜಾನೆ 2:40 ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಇಬ್ಬರು ಶಂಕಿತರು ರಾಷ್ಟ್ರೀಕೃತ ಬ್ಯಾಂಕ್‌ನ ಎಟಿಎಂ ಒಡೆಯಲು ಪ್ರಯತ್ನಿಸುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅವರ ಪ್ರಯತ್ನವನ್ನು ವಿಫಲಗೊಳಿಸಲಾಯಿತು ಮತ್ತು ಪೊಲೀಸರು ತಕ್ಷಣ ತನಿಖೆಯನ್ನು ಪ್ರಾರಂಭಿಸಿದರು.

ವಿಚಾರಣೆ ಬಳಿಕ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದ್ದರು. ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಜಯಶ್ರೀ ಎಸ್ ಮಾನೆ ನೇತೃತ್ವದ ತಂಡ ಪಡುಬಿದ್ರಿ ಪಿಎಸ್ ಐ ಅನಿಲ್ ಕುಮಾರ್ ಟಿ.ನಾಯ್ಕ್, ಕಾಪು ಪಿಎಸ್ ಐ ರಮೇಶ್ ನಾಯ್ಕ್, ಪೊಲೀಸ್ ಸಿಬ್ಬಂದಿಗಳಾದ ಮೋಹನಚಂದ್ರ, ಬಸವರಾಜ್, ಗುರುಪಾದಯ್ಯ, ಪ್ರಸಾದ್, ಪಡುಬಿದ್ರಿ ಎಎಸ್ ಐ ರಾಜೇಶ್, ಸಂದೇಶ್, ಸಿದ್ದರಾಯ, ಶಿರ್ವ ಠಾಣೆಯ ಜೀವನ್ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧನದ ವೇಳೆ ಪೊಲೀಸರು ಸ್ಕೂಟರ್ (ಕೆಎ-19-ಹೆಚ್‌ಕ್ಯೂ-7717), ಜಾಕೆಟ್, ಹೆಲ್ಮೆಟ್, ಕ್ಯಾಪ್, ಹ್ಯಾಂಡ್ ಗ್ಲೌಸ್, ಮಚ್ಚೆ, ಸುತ್ತಿಗೆ, ಅಪರಾಧಕ್ಕೆ ಬಳಸಿದ ಬ್ಯಾಗ್ ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಇಬ್ಬರು ಶಂಕಿತರನ್ನು ವಶಕ್ಕೆ ಪಡೆಯಲಾಗಿದ್ದು, ಸದ್ಯ ಹೆಚ್ಚಿನ ತನಿಖೆ ನಡೆಯುತ್ತಿದೆ.

Vishwa News 24

Recent Posts

ಪಡುಬಿದ್ರಿ: ಪಾನ್ ಸ್ಟಾಲ್‌ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ – vishwanews24

ಪಡುಬಿದ್ರಿ: ಪಾನ್ ಸ್ಟಾಲ್‌ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…

20 minutes ago

ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ – vishwanews24

ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ ಸುಳ್ಯ : ಕೌಟುಂಬಿಕ…

27 minutes ago

ಮೂಡುಬಿದಿರೆ:  ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ.ಕೆ ಭಟ್ ನಿಧನ – vishwanews24

ಮೂಡುಬಿದಿರೆ:  ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ ಕೆ ಭಟ್ ನಿಧನ ಮೂಡುಬಿದಿರೆ: ಪೇಟೆಯ ರತನ್…

40 minutes ago

ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ  ; ಪ್ರಮುಖ ಆರೋಪಿಯ ಬಂಧನ – vishwanews24

ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ  ; ಪ್ರಮುಖ ಆರೋಪಿಯ ಬಂಧನ ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ…

46 minutes ago

ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣ : ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್ – vishwanews24

ಧರ್ಮಸ್ಥಳ ಸೌಜನ್ಯ ಕೊಲೆ ಕೇಸ್ : ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್ ಬೆಳ್ತಂಗಡಿ: ದೇಶದ ಗಮನ…

55 minutes ago

ಉಡುಪಿ : ಅಕ್ಕಕೆಫೆ ನಿರ್ವಹಣೆ – ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ – vishwanews24

 ಉಡುಪಿ : ಅಕ್ಕಕೆಫೆ ನಿರ್ವಹಣೆ - ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ      ಉಡುಪಿ : ರಾಷ್ಟ್ರೀಯ ಗ್ರಾಮೀಣ…

2 hours ago