ಕಾಪು: ಉಳಿಯಾರಗೋಳಿ ಸಮುದ್ರ ಕಿನಾರೆಯಲ್ಲಿ ಟ್ಯೂಬ್ ಧರಿಸಿ ಮೀನುಗಾರಿಕೆಗೆ ತೆರಳಿದ್ದ ವೇಳೆ ಸಮುದ್ರ ಪಾಲಾಗಿದ್ದ ಯಾರ್ಡ್ ಬಳಿ ನಿವಾಸಿ ಸಂತೋಷ್ (45) ಅವರ ಮೃತದೇಹವು ಗುರುವಾರ ಮಧ್ಯಾಹ್ನ ಪೊಲಿಪು ಬಳಿ ಸಮುದ್ರ ಕಿನಾರೆಯಲ್ಲಿ ಪತ್ತೆಯಾಗಿದೆ.
ಬುಧವಾರ ಸಂಜೆ ಟ್ಯೂಬ್ ಮೂಲಕ ಮೀನುಗಾರಿಕೆಗೆ ತೆರಳಿದ್ದ ಸಂತೋಷ್ ಬಲೆ ಬೀಸಿ ವಾಪಸಾಗುತ್ತಿದ್ದ ವೇಳೆ ತೆರೆಯ ಅಬ್ಬರಕ್ಕೆ ಸಿಲುಕಿ ಸಮುದ್ರದಲ್ಲಿ ಮುಳುಗಿದ್ದರು. ಸ್ಥಳೀಯರು ಗಮನಿಸಿ ಕೂಡಲೇ ಅವರನ್ನು ರಕ್ಷಿಸಲು ಪ್ರಯತ್ನಿಸಿದ್ದರಾದರೂ, ರಕ್ಷಿಸಲು ಸಾಧ್ಯವಾಗಿರಲಿಲ್ಲ. ಮುಳುಗು ತಜ¡ ಈಶ್ವರ್ ಮಲ್ಪೆ ಸೇರಿದಂತೆ ರಕ್ಷಣ ತಂಡವು ರಾತ್ರಿಯವರೆಗೂ ಸಂತೋಷ್ ಅವರ ಪತ್ತೆ ಕಾರ್ಯಾಚರಣೆ ನಡೆಸಿದ್ದರು.
ಗುರುವಾರ ಮಧ್ಯಾಹ್ನ ಪೊಲಿಪು ಬಳಿಯ ಸಮುದ್ರ ತೀರದಲ್ಲಿ ಶವ ತೇಲಿಕೊಂಡು ಬಂದಿದ್ದು, ಸ್ಥಳೀಯ ಮೀನುಗಾರ ರಿತೇಶ್ ಅವರು ಮೃತದೇಹವನ್ನು ಮೇಲಕ್ಕೆತ್ತಿ ತಂದು ಪರಿಶೀಲಿಸಿದಾಗ ಅದು ಸಂತೋಷ್ ಅವರ ಮೃತದೇಹವೆಂದು ಗುರುತಿಸಲಾಯಿತು. ಬಳಿಕ ಸೂರಿ ಶೆಟ್ಟಿ ನೇತೃತೃದಲ್ಲಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಎಸ್ಎಸ್ಎಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್ಎಸ್ಎಲ್ಸಿ…
ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…