Featured

ಕಾಪು: ಉಳಿಯಾರಗೋಳಿ ಸಮುದ್ರ ಪಾಲಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – Vishwanews24

ಕಾಪು: ಉಳಿಯಾರಗೋಳಿ ಸಮುದ್ರ ಪಾಲಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಕಾಪು: ಉಳಿಯಾರಗೋಳಿ ಸಮುದ್ರ ಕಿನಾರೆಯಲ್ಲಿ ಟ್ಯೂಬ್‌ ಧರಿಸಿ ಮೀನುಗಾರಿಕೆಗೆ ತೆರಳಿದ್ದ ವೇಳೆ ಸಮುದ್ರ ಪಾಲಾಗಿದ್ದ ಯಾರ್ಡ್‌ ಬಳಿ ನಿವಾಸಿ ಸಂತೋಷ್‌ (45) ಅವರ ಮೃತದೇಹವು ಗುರುವಾರ ಮಧ್ಯಾಹ್ನ ಪೊಲಿಪು ಬಳಿ ಸಮುದ್ರ ಕಿನಾರೆಯಲ್ಲಿ ಪತ್ತೆಯಾಗಿದೆ.

ಬುಧವಾರ ಸಂಜೆ ಟ್ಯೂಬ್‌ ಮೂಲಕ ಮೀನುಗಾರಿಕೆಗೆ ತೆರಳಿದ್ದ ಸಂತೋಷ್‌ ಬಲೆ ಬೀಸಿ ವಾಪಸಾಗುತ್ತಿದ್ದ ವೇಳೆ ತೆರೆಯ ಅಬ್ಬರಕ್ಕೆ ಸಿಲುಕಿ ಸಮುದ್ರದಲ್ಲಿ ಮುಳುಗಿದ್ದರು. ಸ್ಥಳೀಯರು ಗಮನಿಸಿ ಕೂಡಲೇ ಅವರನ್ನು ರಕ್ಷಿಸಲು ಪ್ರಯತ್ನಿಸಿದ್ದರಾದರೂ, ರಕ್ಷಿಸಲು ಸಾಧ್ಯವಾಗಿರಲಿಲ್ಲ. ಮುಳುಗು ತಜ¡ ಈಶ್ವರ್‌ ಮಲ್ಪೆ ಸೇರಿದಂತೆ ರಕ್ಷಣ ತಂಡವು ರಾತ್ರಿಯವರೆಗೂ ಸಂತೋಷ್‌ ಅವರ ಪತ್ತೆ ಕಾರ್ಯಾಚರಣೆ ನಡೆಸಿದ್ದರು.

ಗುರುವಾರ ಮಧ್ಯಾಹ್ನ ಪೊಲಿಪು ಬಳಿಯ ಸಮುದ್ರ ತೀರದಲ್ಲಿ ಶವ ತೇಲಿಕೊಂಡು ಬಂದಿದ್ದು, ಸ್ಥಳೀಯ ಮೀನುಗಾರ ರಿತೇಶ್‌ ಅವರು ಮೃತದೇಹವನ್ನು ಮೇಲಕ್ಕೆತ್ತಿ ತಂದು ಪರಿಶೀಲಿಸಿದಾಗ ಅದು ಸಂತೋಷ್‌ ಅವರ ಮೃತದೇಹವೆಂದು ಗುರುತಿಸಲಾಯಿತು. ಬಳಿಕ ಸೂರಿ ಶೆಟ್ಟಿ ನೇತೃತೃದಲ್ಲಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

9 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

9 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago