ಕಾಪು: ಉಳಿಯಾರಗೋಳಿ ಕೋತಲಕಟ್ಟೆ ಎಂಬಲ್ಲಿ ರವಿವಾರ ಸಂಜೆ ಎರಡು ಬೈಕ್ ಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟು, ಇಬ್ಬರು ಸವಾರರು ಗಾಯಗೊಂಡ ಬಗ್ಗೆ ವರದಿಯಾಗಿದೆ.
ಮೃತರನ್ನು ಬೈಕ್ ಸಹ ಸವಾರ ಪಾಂಗಾಳ ದುರ್ಗಾ ವೆಲ್ ರಿಂಗ್ ವರ್ಕ್ಸ್ ಕಾರ್ಮಿಕ ಮಲ್ಲೇಶ್ (53) ಎಂದು ಗುರುತಿಸಲಾಗಿದೆ. ಬೈಕ್ ಸವಾರರಾದ ಜಯನ್ ಹಾಗೂ ಶ್ರೀನಿವಾಸ್ ಎಂಬವರು ಗಾಯಗೊಂಡಿದ್ದಾರೆ.
ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಪಲ್ಸರ್ ಬೈಕ್ ಮತ್ತು ಉಳಿಯಾರಗೋಳಿ ಸರ್ವೀಸ್ ರಸ್ತೆಯಿಂದ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ಹೋಂಡಾ ಫ್ಯಾಶನ್ ಬೈಕ್ ಪರಸ್ಪರ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಅಪಘಾತದ ರಭಸಕ್ಕೆ ಸಹ ಸವಾರನಾಗಿದ್ದ ಮಲ್ಲೇಶ್ ರಸ್ತೆಗೆ ಎಸೆಯಲ್ಪಟ್ಟರು. ತಲೆಗೆ ತೀವ್ರವಾಗಿ ಗಾಯಗೊಂಡ ಇವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…