ಕಾಪು: ತಾಲೂಕಿನ ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಸಿಕಸವನ್ನು ವಿಲೇವಾರಿ ಮಾಡಲು ತಮ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸೂಕ್ತ ಸ್ಥಳಾವಕಾಶ ವ್ಯವಸ್ಥೆ ಇಲ್ಲದ ಕಾರಣ ಕಾಪು ಪುರಸಭೆಯ ಎಲ್ಲೂರು ಘನತ್ಯಾಜ್ಯ ಘಟಕದಲ್ಲಿ ವಿಲೇವಾರಿ ಮಾಡಲು ಅವಕಾಶ ನೀಡಬೇಕೆಂದು ಮನವಿ ವಿಚಾರವಾಗಿ ಮಂಗಳವಾರ ಕಾಪು ಪುರಸಭೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಯಿತು.
ಈ ಸಂಧರ್ಭದಲ್ಲಿ ಸದಸ್ಯ ಅರುಣ್ ಶೆಟ್ಟಿ ಪಾದೂರು ಆಕ್ಷೇಪ ವ್ಯಕ್ತಪಡಿಸಿ ಸದ್ಯದ ಪರಿಸ್ಥಿತಿಯಲ್ಲಿ ಕಾಪು ಪುರಸಭೆ ಹೊರತು ಪಡಿಸಿ ಬೇರೆ ಯಾವುದೇ ಗ್ರಾಮ ಪಂಚಾಯತ್ ಗಳ ತ್ಯಾಜ್ಯವನ್ನು ಪುರಸಭಾ ಘನತ್ಯಾಜ್ಯ ಘಟಕದಲ್ಲಿ ಸೇರಿಸಿಕೊಂಡರೆ ಮುಂದಿನ ದಿನಗಳಲ್ಲಿ ಬಾರಿ ಸಮಸ್ಯೆ ಎದುರಿಸಬೇಕಾಗುತ್ತದೆ ಹಾಗಾಗಿ ಯಾವುದೇ ಕಾರಣಕ್ಕೂ ಬಡಾ ಗ್ರಾಮಪಂಚಾಯತ್ ನ ಮನವಿ ಪುರಸ್ಕರಿಸಬಾರದೆಂದರು ಇದಕ್ಕೆ ಸದಸ್ಯೆ ಫರ್ಜಾನ ಧ್ವನಿಗೂಡಿಸಿದರು.
ಈ ಬಗ್ಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತಾನಾಡಿ ಬಹುಗ್ರಾಮ ನೈರ್ಮಲ್ಯ ಯೋಜನೆಯಡಿಯಲ್ಲಿ ಸದ್ಯದ ಕಸ ವಿಲೇವಾರಿ ಘಟಕದಲ್ಲಿನ ಐದು ಎಕರೆ ಭೂಮಿಯನ್ನು ಬೇರೆ ಪಂಚಾಯತ್ ಗೆ ತ್ಯಾಜ್ಯ ನಿರ್ವಹಣೆ ಮಾಡಲು ಕಾನೂನು ಪ್ರಕಾರ ನೀಡಬೇಕಾಗುತ್ತೆ ಈ ಬಗ್ಗೆ ಜಿಲ್ಲಾಧಿಕಾರಿಗಳ ಜತೆ ಚರ್ಚಿಸಿ ಮುಂದಿನ ಕ್ರಮ ವಹಿಸಲಾಗುತ್ತೆಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…