Featured

ಕಾಪು : ಎಲ್ಲೂರು ವಿಶ್ವೇಶ್ವರ ದೇಗುಲದ ಸಂಪ್ರದಾಯ ಆಚರಣೆ ಬಗ್ಗೆ ಶೀಘ್ರ ಸೂಕ್ತ ತೀರ್ಮಾನ : ಕೋಟ ಶ್ರೀನಿವಾಸ ಪೂಜಾರಿ – Vishwanews24

ಕಾಪು : ಎಲ್ಲೂರು ವಿಶ್ವೇಶ್ವರ ದೇಗುಲದ ಸಂಪ್ರದಾಯ ಆಚರಣೆ ಬಗ್ಗೆ ಶೀಘ್ರ ಸೂಕ್ತ ತೀರ್ಮಾನ : ಕೋಟ ಶ್ರೀನಿವಾಸ ಪೂಜಾರಿ

ಕಾಪು  :ಉಡುಪಿ ಜಿಲ್ಲೆ ಕಾಪು ತಾಲೂಕಿನ ಎಲ್ಲೂರಿನ ಮಹತೋಭಾರ ವಿಶ್ವೇಶ್ವರ ದೇಗುಲದಲ್ಲಿ ತಟ್ಟೆ ಪ್ರಸಾದ ಮತ್ತು ಅಜಕಾಯಿ ಪ್ರಸಾದದ ವಿಚಾರದಲ್ಲಿ ಎರಡು ಸಮುದಾಯಗಳ ನಡುವೆ ತಗಾದೆ ಇತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿನ ತೀರ್ಮಾನದಂತೆ ಆಚರಣೆ ಸ್ಥಗಿತಗೊಳಿಸಿದ್ದಾರೆ. ಧಾರ್ಮಿಕ ದತ್ತಿ ಇಲಾಖೆಯಿಂದ ಈ ಆಚರಣೆ ಬಗ್ಗೆ ಶೀಘ್ರ ಸೂಕ್ತ ತೀರ್ಮಾನ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಸಭಾ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.

ಗುರುವಾರ ನಿಯಮ 72ರ ಅಡಿ ವಿಷಯ ಪ್ರಸ್ತಾವಿಸಿದ ಕಾಂಗ್ರೆಸ್‌ನ ಯು.ಬಿ. ವೆಂಕಟೇಶ್‌, ವಿಶ್ವೇಶ್ವರ ದೇವಸ್ಥಾನದಲ್ಲಿ ಪುರಾತನ ಕಾಲದಿಂದಲೂ ಸಂಪ್ರದಾಯಗಳು ನಡೆದುಕೊಂಡು ಬಂದಿವೆ. ಆದರೆ, ಕಳೆದೆರಡು ವರ್ಷಗಳಿಂದ ಪ್ರಸ್ತುತ ವ್ಯವಸ್ಥಾಪನ ಸಮಿತಿಯು ಆಚರಣೆಗಳನ್ನು ಕೈಬಿಟ್ಟಿದೆ ಎಂದು ಗಮನ ಸೆಳೆದರು.

ಹಸ್ತಕ್ಷೇಪ ಮಾಡಿಲ್ಲ
ಇದಕ್ಕೆ ಪ್ರತಿಕ್ರಿಯಿಸಿದ ಸಭಾ ನಾಯಕರು, ಉದ್ದೇಶಿತ ದೇವಸ್ಥಾನದಲ್ಲಿ ತಟ್ಟೆ ಪ್ರಸಾದ ಮತ್ತು ಅಜಕಾಯಿ ಪ್ರಸಾದ ವಿಚಾರದಲ್ಲಿ ಎರಡು ಸಮುದಾಯಗಳಲ್ಲಿ ತಗಾದೆ ಇತ್ತು. ಅದನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆಗ ಸೂಕ್ತ ತೀರ್ಮಾನ ಆಗುವವರೆಗೂ ಸ್ಥಗಿತಗೊಳಿಸಲು ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ತೀರ್ಮಾನಿಸಲಾಯಿತು. ವ್ಯವಸ್ಥಾಪನ ಸಮಿತಿಯು ಹಸ್ತಕ್ಷೇಪ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಅದೇನೇ ಇರಲಿ, ಈ ವಿಚಾರದಲ್ಲಿ ಆದಷ್ಟು ಬೇಗ ಸೂಕ್ತ ತೀರ್ಮಾನ ಕೈಗೊಂಡು ಆಚರಣೆಗಳನ್ನು ಮುನ್ನಡೆಸುವಂತೆ ಧಾರ್ಮಿಕ ದತ್ತಿ ಇಲಾಖೆಯಿಂದ ಅಲ್ಲಿನ ಜಿಲ್ಲಾಧಿಕಾರಿಗೆ ಸೂಚಿಸಲಾಗುವುದು ಎಂದು ಹೇಳಿದರು.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

14 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

14 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

16 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

16 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

16 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

17 hours ago