Featured

ಕಾಪು : ಎಲ್ಲೂರು ವಿಶ್ವೇಶ್ವರ ದೇಗುಲದ ಸಂಪ್ರದಾಯ ಆಚರಣೆ ಬಗ್ಗೆ ಶೀಘ್ರ ಸೂಕ್ತ ತೀರ್ಮಾನ : ಕೋಟ ಶ್ರೀನಿವಾಸ ಪೂಜಾರಿ – Vishwanews24

ಕಾಪು : ಎಲ್ಲೂರು ವಿಶ್ವೇಶ್ವರ ದೇಗುಲದ ಸಂಪ್ರದಾಯ ಆಚರಣೆ ಬಗ್ಗೆ ಶೀಘ್ರ ಸೂಕ್ತ ತೀರ್ಮಾನ : ಕೋಟ ಶ್ರೀನಿವಾಸ ಪೂಜಾರಿ

ಕಾಪು  :ಉಡುಪಿ ಜಿಲ್ಲೆ ಕಾಪು ತಾಲೂಕಿನ ಎಲ್ಲೂರಿನ ಮಹತೋಭಾರ ವಿಶ್ವೇಶ್ವರ ದೇಗುಲದಲ್ಲಿ ತಟ್ಟೆ ಪ್ರಸಾದ ಮತ್ತು ಅಜಕಾಯಿ ಪ್ರಸಾದದ ವಿಚಾರದಲ್ಲಿ ಎರಡು ಸಮುದಾಯಗಳ ನಡುವೆ ತಗಾದೆ ಇತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿನ ತೀರ್ಮಾನದಂತೆ ಆಚರಣೆ ಸ್ಥಗಿತಗೊಳಿಸಿದ್ದಾರೆ. ಧಾರ್ಮಿಕ ದತ್ತಿ ಇಲಾಖೆಯಿಂದ ಈ ಆಚರಣೆ ಬಗ್ಗೆ ಶೀಘ್ರ ಸೂಕ್ತ ತೀರ್ಮಾನ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಸಭಾ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.

ಗುರುವಾರ ನಿಯಮ 72ರ ಅಡಿ ವಿಷಯ ಪ್ರಸ್ತಾವಿಸಿದ ಕಾಂಗ್ರೆಸ್‌ನ ಯು.ಬಿ. ವೆಂಕಟೇಶ್‌, ವಿಶ್ವೇಶ್ವರ ದೇವಸ್ಥಾನದಲ್ಲಿ ಪುರಾತನ ಕಾಲದಿಂದಲೂ ಸಂಪ್ರದಾಯಗಳು ನಡೆದುಕೊಂಡು ಬಂದಿವೆ. ಆದರೆ, ಕಳೆದೆರಡು ವರ್ಷಗಳಿಂದ ಪ್ರಸ್ತುತ ವ್ಯವಸ್ಥಾಪನ ಸಮಿತಿಯು ಆಚರಣೆಗಳನ್ನು ಕೈಬಿಟ್ಟಿದೆ ಎಂದು ಗಮನ ಸೆಳೆದರು.

ಹಸ್ತಕ್ಷೇಪ ಮಾಡಿಲ್ಲ
ಇದಕ್ಕೆ ಪ್ರತಿಕ್ರಿಯಿಸಿದ ಸಭಾ ನಾಯಕರು, ಉದ್ದೇಶಿತ ದೇವಸ್ಥಾನದಲ್ಲಿ ತಟ್ಟೆ ಪ್ರಸಾದ ಮತ್ತು ಅಜಕಾಯಿ ಪ್ರಸಾದ ವಿಚಾರದಲ್ಲಿ ಎರಡು ಸಮುದಾಯಗಳಲ್ಲಿ ತಗಾದೆ ಇತ್ತು. ಅದನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆಗ ಸೂಕ್ತ ತೀರ್ಮಾನ ಆಗುವವರೆಗೂ ಸ್ಥಗಿತಗೊಳಿಸಲು ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ತೀರ್ಮಾನಿಸಲಾಯಿತು. ವ್ಯವಸ್ಥಾಪನ ಸಮಿತಿಯು ಹಸ್ತಕ್ಷೇಪ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಅದೇನೇ ಇರಲಿ, ಈ ವಿಚಾರದಲ್ಲಿ ಆದಷ್ಟು ಬೇಗ ಸೂಕ್ತ ತೀರ್ಮಾನ ಕೈಗೊಂಡು ಆಚರಣೆಗಳನ್ನು ಮುನ್ನಡೆಸುವಂತೆ ಧಾರ್ಮಿಕ ದತ್ತಿ ಇಲಾಖೆಯಿಂದ ಅಲ್ಲಿನ ಜಿಲ್ಲಾಧಿಕಾರಿಗೆ ಸೂಚಿಸಲಾಗುವುದು ಎಂದು ಹೇಳಿದರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

19 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

19 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

19 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

22 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

22 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

23 hours ago