ಉಡುಪಿ

ಕಾಪು : ಎಲ್ಲೂರು ಶ್ರೀ ಮಹಾತೋಭಾರ ವಿಶ್ವೇಶ್ವರ ದೇವಾಲಯದಲ್ಲಿ ವಿಜಯನಗರ ದೊರೆ‌ ಕೃಷ್ಣದೇವರಾಯನ‌ ಶಾಸನ ಪತ್ತೆ -Vishwanews24

ಕಾಪು : ಎಲ್ಲೂರು ಶ್ರೀ ಮಹಾತೋಭಾರ ವಿಶ್ವೇಶ್ವರ ದೇವಾಲಯದಲ್ಲಿ ವಿಜಯನಗರ ದೊರೆ‌ ಕೃಷ್ಣದೇವರಾಯನ‌ ಶಾಸನ ಪತ್ತೆ -Vishwanews24

ಕಾಪು: ಕಾಪು ತಾಲೂಕಿನ ಎಲ್ಲೂರು ಶ್ರೀ ಮಹಾತೋಭಾರ ವಿಶ್ವೇಶ್ವರ ದೇವಾಲಯದಲ್ಲಿ ಜೀರ್ಣೋದ್ಧಾರದ ಸಂದರ್ಭದಲ್ಲಿ ಪತ್ತೆಯಾಗಿರುವ ಶಾಸನವು ಕ್ರಿ.‌ಶ 1509 ರ ಕೃಷ್ಣದೇವರಾಯನ ಶಾಸನವಾಗಿದೆ ಎಂದು ಇತಿಹಾಸಕಾರರು ಅಭಿಪ್ರಾಯ ಪಟ್ಟಿದ್ದಾರೆ.

ಈ ಶಾಸನವನ್ನು ಪ್ರಾಚ್ಯಸಂಚಯ ಸಂಶೋಧನಾ ‌ಕೇಂದ್ರ‌-ಉಡುಪಿ‌ ಇದರ ಅಧ್ಯಯನ ನಿರ್ದೇಶಕ ಪ್ರೊ. ಎಸ್. ಎ. ಕೃಷ್ಣಯ್ಯ ಇವರ ಮಾರ್ಗದರ್ಶನದಲ್ಲಿ ಇತಿಹಾಸ ಮತ್ತು ‌ಪುರಾತತ್ವ ಸಂಶೋಧನಾರ್ಥಿ ‌ಶ್ರುತೇಶ್ ಆಚಾರ್ಯ ‌ಮೂಡುಬೆಳ್ಳೆ ಅವರು ಓದಿರುತ್ತಾರೆ‌.

ಕಣ ಶಿಲೆ (ಗ್ರಾನೈಟ್) ಯಲ್ಲಿ ಕೊರೆಯಲ್ಪಟ್ಟಿರುವ ಈ ಶಾಸನದಲ್ಲಿ 12 ಸಾಲುಗಳಿದ್ದು 2 ಅಡಿ‌ ಎತ್ತರ ಮತ್ತು ಅಗಲವನ್ನು ಹೊಂದಿದೆ. ಶಾಸನದ ಮೇಲ್ಭಾಗದಲ್ಲಿ ಸೂರ್ಯ-ಚಂದ್ರ ನಂತರದಲ್ಲಿ ನಂದಿ, ನಂದಾದೀಪಗಳು, ಶಿವಲಿಂಗ, ರಾಜಕತ್ತಿ ಹಾಗೂ ಪುಷ್ಪದ‌ ಕೆತ್ತನೆಯಿದೆ‌.

ಶಾಸನದಲ್ಲಿ ಶಾಲಿವಾಹನ‌ ಶಕವರುಷ 1434 ನಂದನದ ವರ್ತಮಾನ‌ ಸಂವತ್ಸರದ ಜೇಷ್ಠ ಬ 2 ಮಂಗಳವಾರ ಎಂದು ಉಲ್ಲೇಖ‌ವಿದೆ. ಈ ಶಾಸನವನ್ನು ಕೃಷ್ಣರಾಯರ‌ ನಿರೂಪದಿಂದ ಮಂಗಲೂರು ಬಾರಕೂರ ರತ್ನಪ್ಪ ಒಡೆಯ ಆಳುವನ ತಿರುಮಲ‌ರಾಯ ಚೌಟರು ಮತ್ತು ತಿರುಮಲರಸರಾದ ಕಿಂನಿಕ‌ ಹೆಗಡೆಯವರು ದೇವರಾಡಿಯ ಕುಂದ‌ ಹೆಗ್ಗಡೆಗೆ ಎಲ್ಲೂರ ಶ್ರೀ ವಿಶ್ವನಾಥ ದೇವರ ಸನ್ನಿಧಿಯಲ್ಲಿ ಬರೆಸಿಕೊಟ್ಟದ್ದಾಗಿದೆ. ಶಾಸನದಲ್ಲಿ ತಿಮ್ಮಯ್ಯ ದಂಡನಾಯಕ ಹಾಗೂ ಪುತ್ತಿಗೆ, ಐಕಳ ಮತ್ತು ಎಲ್ಲೂರು ಪ್ರದೇಶಗಳ ಉಲ್ಲೇಖವಿದೆ.

ಕ್ಷೇತ್ರಕಾರ್ಯ ಶೋಧನೆಯಲ್ಲಿ ಕೆ.ಎಲ್.‌ ಕುಂಡಂತಾಯ, ರವಿ ಆಳ್ವ ಬಿಳಿಯಾರು, ಗೌತಮ್ ಕಾಮತ್‌ ಮೂಡುಬೆಳ್ಳೆ ಅವರು ಸಹಕರಿಸಿರುತ್ತಾರೆ.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

19 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

20 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

20 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

23 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

23 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

23 hours ago