ಕಾಪು: ಕಾಪು ತಾಲೂಕಿನ ಎಲ್ಲೂರು ಶ್ರೀ ಮಹಾತೋಭಾರ ವಿಶ್ವೇಶ್ವರ ದೇವಾಲಯದಲ್ಲಿ ಜೀರ್ಣೋದ್ಧಾರದ ಸಂದರ್ಭದಲ್ಲಿ ಪತ್ತೆಯಾಗಿರುವ ಶಾಸನವು ಕ್ರಿ.ಶ 1509 ರ ಕೃಷ್ಣದೇವರಾಯನ ಶಾಸನವಾಗಿದೆ ಎಂದು ಇತಿಹಾಸಕಾರರು ಅಭಿಪ್ರಾಯ ಪಟ್ಟಿದ್ದಾರೆ.
ಈ ಶಾಸನವನ್ನು ಪ್ರಾಚ್ಯಸಂಚಯ ಸಂಶೋಧನಾ ಕೇಂದ್ರ-ಉಡುಪಿ ಇದರ ಅಧ್ಯಯನ ನಿರ್ದೇಶಕ ಪ್ರೊ. ಎಸ್. ಎ. ಕೃಷ್ಣಯ್ಯ ಇವರ ಮಾರ್ಗದರ್ಶನದಲ್ಲಿ ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಓದಿರುತ್ತಾರೆ.
ಕಣ ಶಿಲೆ (ಗ್ರಾನೈಟ್) ಯಲ್ಲಿ ಕೊರೆಯಲ್ಪಟ್ಟಿರುವ ಈ ಶಾಸನದಲ್ಲಿ 12 ಸಾಲುಗಳಿದ್ದು 2 ಅಡಿ ಎತ್ತರ ಮತ್ತು ಅಗಲವನ್ನು ಹೊಂದಿದೆ. ಶಾಸನದ ಮೇಲ್ಭಾಗದಲ್ಲಿ ಸೂರ್ಯ-ಚಂದ್ರ ನಂತರದಲ್ಲಿ ನಂದಿ, ನಂದಾದೀಪಗಳು, ಶಿವಲಿಂಗ, ರಾಜಕತ್ತಿ ಹಾಗೂ ಪುಷ್ಪದ ಕೆತ್ತನೆಯಿದೆ.
ಶಾಸನದಲ್ಲಿ ಶಾಲಿವಾಹನ ಶಕವರುಷ 1434 ನಂದನದ ವರ್ತಮಾನ ಸಂವತ್ಸರದ ಜೇಷ್ಠ ಬ 2 ಮಂಗಳವಾರ ಎಂದು ಉಲ್ಲೇಖವಿದೆ. ಈ ಶಾಸನವನ್ನು ಕೃಷ್ಣರಾಯರ ನಿರೂಪದಿಂದ ಮಂಗಲೂರು ಬಾರಕೂರ ರತ್ನಪ್ಪ ಒಡೆಯ ಆಳುವನ ತಿರುಮಲರಾಯ ಚೌಟರು ಮತ್ತು ತಿರುಮಲರಸರಾದ ಕಿಂನಿಕ ಹೆಗಡೆಯವರು ದೇವರಾಡಿಯ ಕುಂದ ಹೆಗ್ಗಡೆಗೆ ಎಲ್ಲೂರ ಶ್ರೀ ವಿಶ್ವನಾಥ ದೇವರ ಸನ್ನಿಧಿಯಲ್ಲಿ ಬರೆಸಿಕೊಟ್ಟದ್ದಾಗಿದೆ. ಶಾಸನದಲ್ಲಿ ತಿಮ್ಮಯ್ಯ ದಂಡನಾಯಕ ಹಾಗೂ ಪುತ್ತಿಗೆ, ಐಕಳ ಮತ್ತು ಎಲ್ಲೂರು ಪ್ರದೇಶಗಳ ಉಲ್ಲೇಖವಿದೆ.
ಕ್ಷೇತ್ರಕಾರ್ಯ ಶೋಧನೆಯಲ್ಲಿ ಕೆ.ಎಲ್. ಕುಂಡಂತಾಯ, ರವಿ ಆಳ್ವ ಬಿಳಿಯಾರು, ಗೌತಮ್ ಕಾಮತ್ ಮೂಡುಬೆಳ್ಳೆ ಅವರು ಸಹಕರಿಸಿರುತ್ತಾರೆ.
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…
ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್ಗೆ ವಧು ಕರೆತರಲು ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…
ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…
ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್ ಶೆಟ್ಟಿ ಆತ್ಮಹತ್ಯೆ…
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…