Featured

ಕಾಪು: ಏ.17 ಮತ್ತು18 ರಂದು ಮಾರಿಯಮ್ಮನ ದೃಢ ಸಂಪ್ರೋಕ್ಷಣೆ – vishwanews24

ಕಾಪು: ಏ.17 ಮತ್ತು18 ರಂದು ಮಾರಿಯಮ್ಮನ ದೃಢ ಸಂಪ್ರೋಕ್ಷಣೆ

ಕಾಪು: ವಿದ್ವಾನ್ ಕೆ.ಜಿ ರಾಘವೇಂದ್ರ ತಂತ್ರಿಯವರ ಮಾರ್ಗದರ್ಶನದಲ್ಲಿ, ದೇವಳದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕೆ.ಪಿ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ ಮತ್ತು ಪ್ರಧಾನ ಅರ್ಚಕರಾದ ಕಲ್ಯಾ ವೇದಮೂರ್ತಿ ಶ್ರೀನಿವಾಸ ತಂತ್ರಿಯವರ ಉಪಸ್ಥಿತಿಯಲ್ಲಿ ಏಪ್ರಿಲ್ 17 ಗುರುವಾರ ಮತ್ತು 18 ಶುಕ್ರವಾರ ಕಾಪು ಮಾರಿಯಮ್ಮನ ದೃಢ ಸಂಪ್ರೋಕ್ಷಣೆ ನಡೆಯಲಿದೆ.

ಏಪ್ರಿಲ್ 17ರ ಬೆಳಿಗ್ಗೆ 9ಕ್ಕೆ ಪ್ರಾರ್ಥನೆ, ಪುಣ್ಯಾಹ, ನಾಂದಿ ಸಮಾರಾಧನೆ, ಮಾತೃಕಾ ಪೂಜೆ, ಗಣಯಾಗ, ನವಗ್ರಹ ಯಾಗ, ಸಂಜೆ 5 ಕ್ಕೆ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸಾಯಂಕಾಲ 6 ರಿಂದ ಸಪ್ತಶತಿ ಪಾರಾಯಣ, ದುರ್ಗಾ ನಮಸ್ಕಾರ ಪೂಜೆ, ಅಷ್ಟಾವಧಾನ. ರಾತ್ರಿ 6.30ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ. ರಾತ್ರಿ 7.30 ಹಾಸ್ಯಮಯ ತುಳು ನಾಟಕ ‘ಅಮ್ಮು.. ಅಮುಂಡರಾ…?’

ಏಪ್ರಿಲ್ 18ರ ಬೆಳಿಗ್ಗೆ 7.30ರಿಂದ ಚತುಃಷಷ್ಠಿ, ಯೋಗಿನೀ ಮಂಡಲ ಪೂಜಾ, ಚತು:ಷಷ್ಠಿ ಯೋಗಿನೀ ಬಲಿ, ಚತುಃಷಷ್ಠಿ ಯೋಗಿನಿ ದೇವತಾ ಪಾಯಸಯಾಗ. ಪೂರ್ವಾಹ್ನ ಗಂಟೆ 11ಕ್ಕೆ ಪೂರ್ಣಾಹುತಿ, ಪಂಚವಿಂಶತಿ ಕಲಶ ಆರಾಧನೆ, ಕಲಶಾಭಿಷೇಕ, ಪ್ರಸನ್ನ ಪೂಜಾ ಪೂರ್ವಾಹ್ನ ಗಂಟೆ 11.30 ಪ್ರಸಾದ ವಿತರಣೆ ಮತ್ತು ಅನ್ನಪ್ರಸಾದ.

ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಉಚ್ಚಂಗಿ ಸಹಿತ ಕಾಪು ಶ್ರೀ ಮಾರಿಯಮ್ಮ ದೇವಿಯ ಪೂರ್ಣಾನುಗ್ರಹಕ್ಕೆ ಪಾತ್ರರಾಗಬೇಕೆಂದು ದೇವಳದ ಅಭಿವೃದ್ದಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ಕೆ ಪ್ರಕಾಶ್ ಶೆಟ್ಟಿ ಮತ್ತು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ ಜಂಟಿಯಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

10 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

10 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

10 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

11 hours ago