ಕಾಪು: ವಿದ್ವಾನ್ ಕೆ.ಜಿ ರಾಘವೇಂದ್ರ ತಂತ್ರಿಯವರ ಮಾರ್ಗದರ್ಶನದಲ್ಲಿ, ದೇವಳದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕೆ.ಪಿ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ ಮತ್ತು ಪ್ರಧಾನ ಅರ್ಚಕರಾದ ಕಲ್ಯಾ ವೇದಮೂರ್ತಿ ಶ್ರೀನಿವಾಸ ತಂತ್ರಿಯವರ ಉಪಸ್ಥಿತಿಯಲ್ಲಿ ಏಪ್ರಿಲ್ 17 ಗುರುವಾರ ಮತ್ತು 18 ಶುಕ್ರವಾರ ಕಾಪು ಮಾರಿಯಮ್ಮನ ದೃಢ ಸಂಪ್ರೋಕ್ಷಣೆ ನಡೆಯಲಿದೆ.
ಏಪ್ರಿಲ್ 17ರ ಬೆಳಿಗ್ಗೆ 9ಕ್ಕೆ ಪ್ರಾರ್ಥನೆ, ಪುಣ್ಯಾಹ, ನಾಂದಿ ಸಮಾರಾಧನೆ, ಮಾತೃಕಾ ಪೂಜೆ, ಗಣಯಾಗ, ನವಗ್ರಹ ಯಾಗ, ಸಂಜೆ 5 ಕ್ಕೆ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸಾಯಂಕಾಲ 6 ರಿಂದ ಸಪ್ತಶತಿ ಪಾರಾಯಣ, ದುರ್ಗಾ ನಮಸ್ಕಾರ ಪೂಜೆ, ಅಷ್ಟಾವಧಾನ. ರಾತ್ರಿ 6.30ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ. ರಾತ್ರಿ 7.30 ಹಾಸ್ಯಮಯ ತುಳು ನಾಟಕ ‘ಅಮ್ಮು.. ಅಮುಂಡರಾ…?’
ಏಪ್ರಿಲ್ 18ರ ಬೆಳಿಗ್ಗೆ 7.30ರಿಂದ ಚತುಃಷಷ್ಠಿ, ಯೋಗಿನೀ ಮಂಡಲ ಪೂಜಾ, ಚತು:ಷಷ್ಠಿ ಯೋಗಿನೀ ಬಲಿ, ಚತುಃಷಷ್ಠಿ ಯೋಗಿನಿ ದೇವತಾ ಪಾಯಸಯಾಗ. ಪೂರ್ವಾಹ್ನ ಗಂಟೆ 11ಕ್ಕೆ ಪೂರ್ಣಾಹುತಿ, ಪಂಚವಿಂಶತಿ ಕಲಶ ಆರಾಧನೆ, ಕಲಶಾಭಿಷೇಕ, ಪ್ರಸನ್ನ ಪೂಜಾ ಪೂರ್ವಾಹ್ನ ಗಂಟೆ 11.30 ಪ್ರಸಾದ ವಿತರಣೆ ಮತ್ತು ಅನ್ನಪ್ರಸಾದ.
ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಉಚ್ಚಂಗಿ ಸಹಿತ ಕಾಪು ಶ್ರೀ ಮಾರಿಯಮ್ಮ ದೇವಿಯ ಪೂರ್ಣಾನುಗ್ರಹಕ್ಕೆ ಪಾತ್ರರಾಗಬೇಕೆಂದು ದೇವಳದ ಅಭಿವೃದ್ದಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ಕೆ ಪ್ರಕಾಶ್ ಶೆಟ್ಟಿ ಮತ್ತು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ ಜಂಟಿಯಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…