Featured

ಕಾಪು : ಐದು ದಶಕ ಒಟ್ಟಿಗೇ ಜೀವಿಸಿ ಸಾವಿನಲ್ಲೂ ಒಂದಾದ ದಂಪತಿ – Vishwanews24

ಕಾಪು : ಐದು ದಶಕ ಒಟ್ಟಿಗೇ ಜೀವಿಸಿ ಸಾವಿನಲ್ಲೂ ಒಂದಾದ ದಂಪತಿ

ಕಾಪು : ಐದು ದಶಕ ಒಟ್ಟಿಗೇ ಜೀವಿಸಿದ್ದ ದಂಪತಿಯೊಬ್ಬರು ಸಾವಿನಲ್ಲೂ ಒಂದಾಗಿದ್ದಾರೆ. ಪತಿ ನಿಧನದ ಕೆಲವೇ ಗಂಟೆಗಳ ಅಂತರದಲ್ಲಿ ಪತ್ನಿಯೂ ಮೃತಪಟ್ಟಿದ್ದು, ಇಬ್ಬರ ಅಂತಿಮ ಕಾರ್ಯಗಳು ಒಟ್ಟಿಗೇ ನಡೆದಿದೆ.

ಕಾಪು ತಾಲೂಕಿನ ಬೆಳಪು ಎಂಬಲ್ಲಿ ಈ ಘಟನೆ ನಡೆದಿದೆ. ಕೃಷ್ಣ ಅಲಿಯಾಸ್ ಕುಟ್ಟಿ ಶೆಟ್ಟಿ (80) ಮತ್ತು ಅವರ ಪತ್ನಿ ರೇವತಿ ಶೆಟ್ಟಿ (75) ಅವರು ದಿನದ ಅಂತರದಲ್ಲಿ ಮೃತಪಟ್ಟ ದಂಪತಿ. ಕೃಷ್ಣ ಅವರು ವಯಸ್ಸಿನ ಕಾರಣದಿಂದ ಆಗಸ್ಟ್‌ 2ರ ಬೆಳಗ್ಗೆ ಮೃತಪಟ್ಟಿದ್ದಾರೆ. ರೇವತಿ ಅವರು ಆಗಸ್ಟ್‌ 3ರ ಬೆಳಗ್ಗೆ ಮೃತಪಟ್ಟಿದ್ದಾರೆ. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ದಂಪತಿಯ ಮಕ್ಕಳು ಮುಂಬೈ ಮತ್ತು ಇತರ ಸ್ಥಳಗಳಲ್ಲಿ ವಾಸವಾಗಿದ್ದಾರೆ. ಹೀಗಾಗಿ ಮಕ್ಕಳು ಬರುವವರೆಗೆ ಅಂತಿಮ ವಿಧಿಗಳನ್ನು ನೆರವೇರಿಸಲು ಕಾಯಲಾಗುತ್ತಿತ್ತು. ಆದರೆ ಅದಕ್ಕೂ ಮುನ್ನ ಮರುದಿನ ಬೆಳಗ್ಗೆ ಅವರ ಪತ್ನಿಯೂ ಸಾವನ್ನಪ್ಪಿದ್ದರು. ಹೀಗಾಗಿ ಇಬ್ಬರ ಅಂತಿಮ ವಿಧಿವಿಧಾನಗಳನ್ನು ಮಕ್ಕಳು, ಕುಟುಂಬದವರು ಸೇರಿ ಸಾಮಾಜಿಕ ಕಾರ್ಯಕರ್ತ ಸೂರಿ ಶೆಟ್ಟಿ ನೇತೃತ್ವದಲ್ಲಿ ನೆರವೇರಿಸಲಾಯಿತು.

 

Vishwa News 24

Recent Posts

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

4 minutes ago

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

22 minutes ago

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago