ಕಾಪು : ಐದು ದಶಕ ಒಟ್ಟಿಗೇ ಜೀವಿಸಿದ್ದ ದಂಪತಿಯೊಬ್ಬರು ಸಾವಿನಲ್ಲೂ ಒಂದಾಗಿದ್ದಾರೆ. ಪತಿ ನಿಧನದ ಕೆಲವೇ ಗಂಟೆಗಳ ಅಂತರದಲ್ಲಿ ಪತ್ನಿಯೂ ಮೃತಪಟ್ಟಿದ್ದು, ಇಬ್ಬರ ಅಂತಿಮ ಕಾರ್ಯಗಳು ಒಟ್ಟಿಗೇ ನಡೆದಿದೆ.
ಕಾಪು ತಾಲೂಕಿನ ಬೆಳಪು ಎಂಬಲ್ಲಿ ಈ ಘಟನೆ ನಡೆದಿದೆ. ಕೃಷ್ಣ ಅಲಿಯಾಸ್ ಕುಟ್ಟಿ ಶೆಟ್ಟಿ (80) ಮತ್ತು ಅವರ ಪತ್ನಿ ರೇವತಿ ಶೆಟ್ಟಿ (75) ಅವರು ದಿನದ ಅಂತರದಲ್ಲಿ ಮೃತಪಟ್ಟ ದಂಪತಿ. ಕೃಷ್ಣ ಅವರು ವಯಸ್ಸಿನ ಕಾರಣದಿಂದ ಆಗಸ್ಟ್ 2ರ ಬೆಳಗ್ಗೆ ಮೃತಪಟ್ಟಿದ್ದಾರೆ. ರೇವತಿ ಅವರು ಆಗಸ್ಟ್ 3ರ ಬೆಳಗ್ಗೆ ಮೃತಪಟ್ಟಿದ್ದಾರೆ. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ದಂಪತಿಯ ಮಕ್ಕಳು ಮುಂಬೈ ಮತ್ತು ಇತರ ಸ್ಥಳಗಳಲ್ಲಿ ವಾಸವಾಗಿದ್ದಾರೆ. ಹೀಗಾಗಿ ಮಕ್ಕಳು ಬರುವವರೆಗೆ ಅಂತಿಮ ವಿಧಿಗಳನ್ನು ನೆರವೇರಿಸಲು ಕಾಯಲಾಗುತ್ತಿತ್ತು. ಆದರೆ ಅದಕ್ಕೂ ಮುನ್ನ ಮರುದಿನ ಬೆಳಗ್ಗೆ ಅವರ ಪತ್ನಿಯೂ ಸಾವನ್ನಪ್ಪಿದ್ದರು. ಹೀಗಾಗಿ ಇಬ್ಬರ ಅಂತಿಮ ವಿಧಿವಿಧಾನಗಳನ್ನು ಮಕ್ಕಳು, ಕುಟುಂಬದವರು ಸೇರಿ ಸಾಮಾಜಿಕ ಕಾರ್ಯಕರ್ತ ಸೂರಿ ಶೆಟ್ಟಿ ನೇತೃತ್ವದಲ್ಲಿ ನೆರವೇರಿಸಲಾಯಿತು.
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…