ಕಾಪು: ಖಾಸಗಿಯವರ ದೂರು, ಲೋಕಾಯುಕ್ತದ ಆದೇಶದ ಹಿನ್ನಲೆಯಲ್ಲಿ ಕಟಪಾಡಿ ಶಿರ್ವ ರಸ್ತೆಯಲ್ಲಿರುವ ಕಟಪಾಡಿ ರಿಕ್ಷಾ ಸ್ಟ್ಯಾಂಡ್ ಅನ್ನು ತೆರವುಗೊಳಿಸಲು ಬಂದ ಅಧಿಕಾರಿಗಳು ಬರಿಗೈಯಲ್ಲಿ ಹಿಂದಿರುಗಿದ ಘಟನೆ ನಡೆದಿದೆ.
ಲೋಕೋಪಯೋಗಿ ಎಂಜಿನಿಯರ್ ಜಗದೀಶ್ ಭಟ್ ಮತ್ತು ಅಧಿಕಾರಿಗಳು ಸ್ಥಳಕ್ಕೆ ಬಂದು ತೆರವು ಕಾರ್ಯಾಚರಣೆಗೆ ಮುಂದಾದಾಗ ಗ್ರಾ.ಪಂ ಅಧಿಕಾರಿಗಳು ಮತ್ತು ರಿಕ್ಷಾ ಯೂನಿಯನ್ ಪದಾಧಿಕಾರಿಗಳು ಮಧ್ಯ ಪ್ರವೇಶಿಸಿ ರಿಕ್ಷಾ ಸ್ಟ್ಯಾಂಡ್ ಅನಧಿಕೃತವಲ್ಲ, ಗ್ರಾಪಂ ನಿರ್ಣಯದಂತೆ ಇದನ್ನು ಈಗಾಗಲೇ
ಅಧಿಕೃತಗೊಳಿಸಲಾಗಿದೆ ಎಂದು ಅಧಿಕಾರಿಗಳಿಗೆ ಮನದಟ್ಟು ಮಾಡಿದರು.
ನಿಷೇಧಿತ PFI ಸಂಘಟನೆಯ ದ.ಕ ಜಿಲ್ಲಾಧ್ಯಕ್ಷ ಎಜಾಝ್ ಬಂಟ್ವಾಳ ಪೊಲೀಸರ ವಶಕ್ಕೆ – Vishwanews24
ಗ್ರಾಮ ಪಂಚಾಯತಿ ಅಧ್ಯಕ್ಷೆ ಇಂದಿರಾ ಆಚಾರ್ಯ, ಉಪಾಧ್ಯಕ್ಷ ಎ.ಆರ್. ಅಬೂಬಕ್ಕರ್, ರಿಕ್ಷಾ ಯೂನಿಯನ್ ಅಧ್ಯಕ್ಷ ಪ್ರೇಮ್ ಕುಮಾರ್, ಗೌರವಾಧ್ಯಕ್ಷ ಗಣೇಶ್ ಕುಮಾರ್ ಮಟ್ಟು, ಕಾರ್ಯದರ್ಶಿ ಮಹಮ್ಮದ್ ಹನೀಫ್ ಮಾತನಾಡಿ, ಇದನ್ನು ಅನಧಿಕೃತ ಎನ್ನುವವರು ಗ್ರಾಮ ಪಂಚಾಯತಿ ನಿರ್ಣಯವನ್ನು ಗೌರವಿಸಬೇಕು. ಗ್ರಾಮ ಪಂಚಾಯತಿ ಅಧಿಕೃತ ನಿಲ್ದಾಣವೆಂದು ಘೋಷಿಸಿ ಈಗಾಗಲೇ ಇಲ್ಲಿ ಫಲಕ ಅಳವಡಿಸಿರುವುದರಿಂದ ಇದನ್ನು ಅನಧಿಕೃತ ಎನ್ನುವುದು ಸರಿಯಲ್ಲ. ಶಾಸಕರು ಕೂಡ ಈ ಬಗ್ಗೆ ಈ ಒಮ್ಮತ ಹೊಂದಿದ್ದುಅಧಿಕಾರಿಗಳನ್ನು ಕರೆಸಿ ಮಾತನಾಡುವುದಾಗಿ ತಿಳಿಸಿದ್ದಾರೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…