Featured

ಕಾಪು: ಕರಾವಳಿ ಜಿಲ್ಲೆಗಳಲ್ಲಿ ಪಡಿತರದ ಜತೆಗೆ ಕುಚ್ಚಲಕ್ಕಿ ನೀಡಲು ಸರಕಾರ ಬದ್ಧ : ಸಚಿವ ಕೋಟ – Vishwanews24

ಕಾಪು: ಕರಾವಳಿ ಜಿಲ್ಲೆಗಳಲ್ಲಿ ಪಡಿತರದ ಜತೆಗೆ ಕುಚ್ಚಲಕ್ಕಿ ನೀಡಲು ಸರಕಾರ ಬದ್ಧ : ಸಚಿವ ಕೋಟ

ಕಾಪು: ಕರಾವಳಿ ಜಿಲ್ಲೆಗಳಲ್ಲಿ ಪಡಿತರದ ಜತೆಗೆ ಕುಚ್ಚಲಕ್ಕಿ ನೀಡಲು ಸರಕಾರ ಬದ್ಧವಿದೆ. ಕರಾವಳಿ ಜಿಲ್ಲೆಯ ಜೀವನಾಡಿಯಾಗಿರುವ ಕುಚ್ಚಲಕ್ಕಿ ಪೂರೈಕೆ ವಿಚಾರವನ್ನು ಯಾರೂ ಹಾಸ್ಯಾಸ್ಪದ ವಿಷಯವನ್ನಾಗಿಸುವ ಅಗತ್ಯವಿಲ್ಲ. ಕುಚ್ಚಲಕ್ಕಿ ವಿತರಿಸುವ ಯೋಜನೆಗೆ ಈಗಾಗಲೇ ಅನುಮೋದನೆ ದೊರೆತಿದ್ದು ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದೆ.

ಮುಂದಿನ ದಿನಗಳಲ್ಲಿ ತೊಡಕು ನಿವಾರಿಸಿ ವಿತರಣೆಗೆ ಸರಕಾರ ಬದ್ಧವಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿಯಲ್ಲಿ ಕುಚ್ಚಲಕ್ಕಿಗೆ ಪೂರಕವಾದ ಭತ್ತದ ತಳಿಗಳಾದ ಎಂಒ4, ಅಭಿಲಾಷಾ, ಜ್ಯೋತಿ, 1001 ಕೇಂದ್ರದ ಬೆಂಬಲ ಬೆಲೆ ವ್ಯಾಪ್ತಿಗೆ ಬಂದಿರಲಿಲ್ಲ. ಈ ತಳಿಗಳ ಪಟ್ಟಿ ಮಾಡಿ ಕೇಂದ್ರ ಸರಕಾರದಿಂದ ಅನುಮೋದನೆ ಪಡೆದು ಹೆಚ್ಚುವರಿಯಾಗಿ 500 ರೂ. ಸಬ್ಸಿಡಿ ನೀಡಿ ಭತ್ತ ಖರೀದಿಗೆ ಮುಂದಾಗಿದ್ದೇವೆ. ಕರಾವಳಿಯ ಮೂರು ಜಿಲ್ಲೆಗಳಲ್ಲೂ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ನಿರೀಕ್ಷೆ ಮಾಡಿದ ಪ್ರಮಾಣದಲ್ಲಿ ಭತ್ತ ಖರೀದಿಗೆ ಬಂದಿರಲಿಲ್ಲ. ಮುಂದೆ ಇದನ್ನು ಸರಿದೂಗಿಸಿಕೊಂಡು ಯೋಜನೆ ಅನುಷ್ಠಾನಕ್ಕೆ ತರಲಾಗುವುದು ಎಂದರು.

ಶಾಸಕ ಲಾಲಾಜಿ ಆರ್‌. ಮೆಂಡನ್‌, ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್‌ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

14 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

14 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago