ಕಾಪು: ಕರಾವಳಿ ಪ್ರದೇಶದ ಪಶ್ಚಿಮ ಘಟ್ಟದ ನದಿಗಳಿಗೆ ಅಡ್ಡಲಾಗಿ ಕಿಂಡಿ ಅಣೆಕಟ್ಟು ಯೋಜನೆಗಳನ್ನು ಅನುಷ್ಠಾನಗೊಳಿಸುವ ಕುರಿತು ಮಾಸ್ಟರ್ ಪ್ಲಾನ್ ಸಿದ್ಧಪಡಿಸಲಾಗಿದ್ದು ಈ ಯೋಜನೆಯಡಿ 1348 ಹೊಸ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಲಾಗುವುದು ಎಂದು ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ಇಲಾಖೆ ಸಚಿವ ಮಾಧುಸ್ವಾಮಿ ಹೇಳಿದರು.
ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಯೋಜನೆಗೆ 3,976 ಕೋಟಿ ರೂಪಾಯಿ ವೆಚ್ಚವಾಗಲಿದ್ದು, ಈಗಾಗಲೇ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರಕುವ ನಿರೀಕ್ಷೆಯಿದೆ ಎಂದರು.
ಸಮುದ್ರ ಸೇರುವ ನೇತ್ರಾವತಿ ನದಿ ಮತ್ತು ಕರಾವಳಿ ಜಿಲ್ಲೆಗಳ ವಿವಿಧ ನದಿ-ತೊರೆಗಳ ನೀರನ್ನು ನಮ್ಮಲ್ಲೇ ಉಳಿಸಿಕೊಂಡು, ಅದನ್ನು ರೈತರಿಗೆ ಒದಗಿಸಿಕೊಡುವ ನಿಟ್ಟಿನಲ್ಲಿ ಬೃಹತ್ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.
ಉಡುಪಿ ಜಿಲ್ಲೆಯಲ್ಲಿ ನಿರ್ಹಣೆಯಿಲ್ಲದೇ ಸೊರಗುತ್ತಿರುವ ಕಿಂಡಿಅಣೆಕಟ್ಟುಗಳ ಬಗ್ಗೆ ಸಚಿವರ ಗಮನಕ್ಕೆ ತಂದಾಗ ಈ ಬಗ್ಗೆ ಇಲಾಖಾಧಿಕಾರಿಗಳೊಂದಿಗೆ ಚರ್ಚಿಸಿ, ಕ್ರಮ ತೆಗೆದುಕೊಳ್ಳಲಾಗುವುದು. ನಿರ್ವಹಣೆ ಕೊರತೆಯಿಂದ ತೊಂದರೆಗೊಳಗಾದ ಕಿಂಡಿಅಣೆಕಟ್ಟುಗಳ ದುರಸ್ತಿಗಾಗಿ ಕೂಡಲೇ 4 ಕೋಟಿ ರೂಪಾಯಿ ಅನುದಾನವನ್ನು ಹೊಂದಿಸಿಕೊಡಲಾಗುವುದು ಎಂದರು.
ಸಿ.ಆರ್.ಝ.ಡ್ ಕಾಯ್ದೆ ತಿದ್ದುಪಡಿಯ ಬಗ್ಗೆ ಸರಕಾರ ತನ್ನ ಪ್ರಯತ್ನ ಮುಂದುವರಿಸಿದೆ. ಖಾಯಿದೆಯನ್ನು ಕೇಂದ್ರ ಸರಕಾರ ತಿದ್ದುಪಡಿ ಮಾಡಿದ್ದು, ಅದರ ಮ್ಯಾಪಿಂಗ್ ಬಾಕಿಯಾಗಿದೆ. ಮ್ಯಾಪಿಂಗ್ ಪೂರ್ಣಗೊಂಡ ಕೂಡಲೇ ಬದಲಾದ ಸಿ.ಆರ್.ಝಡ್ ಕಾಯ್ದೆಯನ್ನು ಜಾರಿಗೆ ತರಲಾಗುವುದು ಎಂದರು.
ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಕ್ಕೆ ನಡೆದಿರುವ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ವಿಚಾರದಲ್ಲಿ ಸರಕಾರ ಈಗಾಗಲೇ ಕೋರ್ಟ್ ಗೆ ದಾಖಲಾತಿಗಳನ್ನು ಸಲ್ಲಿಸಿದ್ದು, ಒಂದೆರಡು ದಿನದಲ್ಲಿ ಮೇಲ್ಮನವಿ ಸಲ್ಲಿಸಲಿದ್ದೇವೆ. ಶೀಘ್ರ ಗೊಂದಲ ಬಗೆಹರಿಯುವ ವಿಶ್ವಾಸವಿದೆ ಎಂದರು.
ಸಂಪುಟ ಪುನಾರ್ರಚನೆ, ಸೇರ್ಪಡೆ ಇತ್ಯಾದಿಗಳ ಬಗ್ಗೆ ನೋ ಕಮೆಂಟ್ಸ್ ಎಂದ ಸಚಿವರು, ಕಾಂಟ್ರವರ್ಸಿ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದ್ದೇನೆ ಎಂದರು.
ಉಡುಪಿ ಶಾಸಕ ರಘುಪತಿ ಭಟ್, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿ ಮೃತ್ಯುಂಜಯ ಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…