ಕಾಪು: ಕರಾವಳಿ ಜಿಲ್ಲೆಗಳಲ್ಲಿ 1348 ಹೊಸ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಲಾಗುವುದು : ಸಚಿವ ಮಾಧುಸ್ವಾಮಿ -Vishwanews24

ಕಾಪು: ಕರಾವಳಿ ಜಿಲ್ಲೆಗಳಲ್ಲಿ 1348 ಹೊಸ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಲಾಗುವುದು : ಸಚಿವ ಮಾಧುಸ್ವಾಮಿ -Vishwanews24

ಕಾಪು: ಕರಾವಳಿ ಪ್ರದೇಶದ ಪಶ್ಚಿಮ ಘಟ್ಟದ ನದಿಗಳಿಗೆ ಅಡ್ಡಲಾಗಿ ಕಿಂಡಿ ಅಣೆಕಟ್ಟು ಯೋಜನೆಗಳನ್ನು ಅನುಷ್ಠಾನಗೊಳಿಸುವ ಕುರಿತು ಮಾಸ್ಟರ್ ಪ್ಲಾನ್ ಸಿದ್ಧಪಡಿಸಲಾಗಿದ್ದು ಈ ಯೋಜನೆಯಡಿ 1348 ಹೊಸ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಲಾಗುವುದು ಎಂದು ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ಇಲಾಖೆ ಸಚಿವ ಮಾಧುಸ್ವಾಮಿ ಹೇಳಿದರು.

ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಯೋಜನೆಗೆ 3,976 ಕೋಟಿ ರೂಪಾಯಿ ವೆಚ್ಚವಾಗಲಿದ್ದು, ಈಗಾಗಲೇ ಸರಕಾರಕ್ಕೆ ಪ್ರಸ್ತಾವನೆ‌ ಸಲ್ಲಿಸಲಾಗಿದೆ. ಮುಂದಿನ‌ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರಕುವ ನಿರೀಕ್ಷೆಯಿದೆ ಎಂದರು.

ಸಮುದ್ರ ಸೇರುವ ನೇತ್ರಾವತಿ ನದಿ ಮತ್ತು ಕರಾವಳಿ ಜಿಲ್ಲೆಗಳ ವಿವಿಧ ನದಿ-ತೊರೆಗಳ ನೀರನ್ನು ನಮ್ಮಲ್ಲೇ ಉಳಿಸಿಕೊಂಡು, ಅದನ್ನು ರೈತರಿಗೆ ಒದಗಿಸಿಕೊಡುವ ನಿಟ್ಟಿನಲ್ಲಿ ಬೃಹತ್ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.

ಉಡುಪಿ ಜಿಲ್ಲೆಯಲ್ಲಿ ನಿರ್ಹಣೆಯಿಲ್ಲದೇ ಸೊರಗುತ್ತಿರುವ ಕಿಂಡಿಅಣೆಕಟ್ಟುಗಳ ಬಗ್ಗೆ ಸಚಿವರ ಗಮನಕ್ಕೆ ತಂದಾಗ ಈ ಬಗ್ಗೆ ಇಲಾಖಾಧಿಕಾರಿಗಳೊಂದಿಗೆ ಚರ್ಚಿಸಿ, ಕ್ರಮ ತೆಗೆದುಕೊಳ್ಳಲಾಗುವುದು.‌ ನಿರ್ವಹಣೆ ಕೊರತೆಯಿಂದ ತೊಂದರೆಗೊಳಗಾದ ಕಿಂಡಿಅಣೆಕಟ್ಟುಗಳ ದುರಸ್ತಿಗಾಗಿ ಕೂಡಲೇ 4 ಕೋಟಿ ರೂಪಾಯಿ ಅನುದಾನವನ್ನು ಹೊಂದಿಸಿಕೊಡಲಾಗುವುದು ಎಂದರು.

ಸಿ.ಆರ್.ಝ.ಡ್ ಕಾಯ್ದೆ ತಿದ್ದುಪಡಿಯ ಬಗ್ಗೆ ಸರಕಾರ ತನ್ನ ಪ್ರಯತ್ನ ಮುಂದುವರಿಸಿದೆ. ಖಾಯಿದೆಯನ್ನು ಕೇಂದ್ರ ಸರಕಾರ ತಿದ್ದುಪಡಿ ಮಾಡಿದ್ದು, ಅದರ ಮ್ಯಾಪಿಂಗ್ ಬಾಕಿಯಾಗಿದೆ. ಮ್ಯಾಪಿಂಗ್ ಪೂರ್ಣಗೊಂಡ ಕೂಡಲೇ ಬದಲಾದ ಸಿ.ಆರ್.ಝಡ್ ಕಾಯ್ದೆಯನ್ನು ಜಾರಿಗೆ ತರಲಾಗುವುದು ಎಂದರು.

ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಕ್ಕೆ ನಡೆದಿರುವ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ವಿಚಾರದಲ್ಲಿ ಸರಕಾರ ಈಗಾಗಲೇ ಕೋರ್ಟ್ ಗೆ ದಾಖಲಾತಿಗಳನ್ನು ಸಲ್ಲಿಸಿದ್ದು, ಒಂದೆರಡು ದಿನದಲ್ಲಿ ಮೇಲ್ಮನವಿ ಸಲ್ಲಿಸಲಿದ್ದೇವೆ. ಶೀಘ್ರ ಗೊಂದಲ ಬಗೆಹರಿಯುವ ವಿಶ್ವಾಸವಿದೆ ಎಂದರು.

ಸಂಪುಟ ಪುನಾರ್ರಚನೆ, ಸೇರ್ಪಡೆ ಇತ್ಯಾದಿಗಳ‌ ಬಗ್ಗೆ ನೋ ಕಮೆಂಟ್ಸ್ ಎಂದ ಸಚಿವರು, ಕಾಂಟ್ರವರ್ಸಿ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದ್ದೇನೆ ಎಂದರು.

ಉಡುಪಿ ಶಾಸಕ ರಘುಪತಿ ಭಟ್, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿ ಮೃತ್ಯುಂಜಯ ಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.

 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

19 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

20 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

20 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

20 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

20 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

22 hours ago