ಕಾಪು : ಇಲ್ಲಿನ ಕಾಂಗ್ರೆಸ್ ಕಚೇರಿ ರಾಜೀವ ಭವನದಲ್ಲಿ ಅಂಬೇಡ್ಕರ್ ಜಯಂತಿಯನ್ನು ಕಾರ್ಯಕರ್ತರ ಸಮ್ಮುಖದಲ್ಲಿ ಆಚರಿಸಲಾಯಿತು.
ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಪುಷ್ಪಾರ್ಚನೆಗೈಯುವ ಮುಖಾಂತರ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ನಮಿಸಿದರು.
ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಈ ದೇಶಕ್ಕೆ ಸಂವಿಧಾನವನ್ನು ಕೊಟ್ಟವರು ಅವರು ನೀಡಿರುವ ಸಂವಿಧಾನದಿಂದಾಗಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ ವಿದ್ಯಾರ್ಥಿ ಜೀವನದಲ್ಲಿ ಶೋಷಣೆಯನ್ನು ಅನುಭವಿಸಿದ ಅಂಬೇಡ್ಕರ್ ಅವರು ಇಂದು ದೇಶದಲ್ಲಿ ಮಹಾನ್ ವ್ಯಕ್ತಿಯಾಗಿದ್ದಾರೆ.
ಸಂವಿಧಾನ ಬದಲಾವಣೆ ಮಾಡಬೇಕೆಂಬ ಕೂಗುತೆಯಲ್ಲಿ ಬರುತ್ತಿದೆ, ಮಹಾತ್ಮ ಗಾಂಧೀಜಿಯನ್ನು ಕೂಡ ಇವತ್ತು ವ್ಯಕ್ತಿತ್ವವನ್ನು ಕೀಲು ಮಾಡುವ ಪ್ರಯತ್ನ ಬಿಜೆಪಿ ಮಾಡುತ್ತಿದೆ ಸಂವಿಧಾನವನ್ನು ಉಳಿಸುವ ದೃಷ್ಟಿಯಲ್ಲಿ ನಾವೆಲ್ಲರೂ ಪಣತೊಡುವ ಅಗತ್ಯವಾಗಿದೆ.
ಚುನಾವಣೆ ನಡೆಯುವ ಮೊದಲ ಪಟಾಕಿ ಹೊಡೆದರೆ ಸಂಭ್ರಮಿಸುವ ಇಂಥ ಜನರಿಂದ ಸಂವಿಧಾನ ಉಳಿಯಲು ಸಾಧ್ಯವಿದೆಯೇ, ಬಡವರ ಬದುಕನ್ನ ಹಾಳು ಮಾಡಿರುವ ಕಾರಣಕ್ಕಾಗಿ ಪಟಾಕಿ ಹೊಡೆಯುತ್ತಾರೋ, ಅಥವಾ 40% ಕಮಿಷನ್ ಪಡೆದಿರುವುದಕ್ಕೆ ಅವರು ಪಟಾಕಿ ಹೊಡೆಯುತ್ತಾರೋ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಅವರು ಹೇಳಿದರು.
ಬಡವರ ರಕ್ಷಣೆ ಮಾಡದ ಬಿಜೆಪಿಯಿಂದ ಯಾವ ರೀತಿಯಲ್ಲಿ ಮತವನ್ನು ಕೇಳುತ್ತದೆ ಎಂಬುದು ಗೊತ್ತಿಲ್ಲ ಕಾಪುವಿನ ಅಭಿವೃದ್ಧಿ ಆಗಿದ್ದರೆ ಅದು ವಿನಯ್ ಕುಮಾರ್ ಸೊರಕೆ ಅವಧಿಯಲ್ಲಿ ಮಾತ್ರ ಎಂಬುದು ಜನರಿಗೆ ಗೊತ್ತಿದೆ ಎಂದರು.
ಈ ಸಂದರ್ಭದಲ್ಲಿ ಬೆಳಪು ದೇವಿ ಪ್ರಸಾದ್ ಶೆಟ್ಟಿ, ಎಂ ಎ ಗಫುರ್ ,ಸುಕುಮಾರ್ ಶೆಟ್ಟಿ ,ನವೀನ್ ಚಂದ್ರ ಶೆಟ್ಟಿ ಶಿವಾಜಿ ಸುವರ್ಣ ಮೂಡುಬೆಳ್ಳೆ ಮೊದಲಾದವರು ಉಪಸ್ಥಿತರಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…